Slide
Slide
Slide
previous arrow
next arrow

ಬಿದ್ರಕಾನ ಪ್ರೌಢಶಾಲೆಯಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

300x250 AD

ಸಿದ್ದಾಪುರ: 76 ನೇ ಸ್ವಾತಂತ್ರ್ಯ ದಿನದ ಶುಭ ಸಂದರ್ಭದ ಧ್ವಜಾರೋಹಣ ಕಾರ್ಯಕ್ರಮವನ್ನು ಮಿಯಾರ್ಡಿ ಸಂಸ್ಥೆಯ ಅಧ್ಯಕ್ಷರಾದ ಆರ್. ಎಸ್. ಹೆಗಡೆ ತುಪ್ಪದ ಪ್ರೌಢಶಾಲೆಯ ಆವಾರದಲ್ಲಿ ನೆರವೇರಿಸಿದರು. 

ಯುವಜನರು ಮತ್ತು ದೇಶದ ಎಲ್ಲ ನಾಗರಿಕರೂ ನಮ್ಮ ಜವಾಬ್ದಾರಿಯನ್ನು ಅರಿತು ನಡೆದುಕೊಳ್ಳಬೇಕು. ರಾಷ್ಟ್ರವನ್ನು ಗೌರವಿಸುವುದು ನಮ್ಮ ಕರ್ತವ್ಯವೆಂದು ಆರ್.‌ಎಸ್. ಹೆಗಡೆ ಮಕ್ಕಳಿಗೆ ಕಿವಿಮಾತು ಹೇಳಿದರು.

ಶಾಲಾ ಆಡಳಿತ ಮಂಡಳಿ, ಶಾಲಾ ಅಭಿವೃದ್ಧಿ ಮಂಡಳಿಯ ಪದಾಧಿಕಾರಿಗಳು, ಶಿಕ್ಷಕರು, ಸಿಬ್ಬಂದಿಗಳು, ಊರ ನಾಗರಿಕರು, ಶಾಲಾ ವಿದ್ಯಾರ್ಥಿಗಳು ಆಜಾದಿ ಕಾ ಅಮೃತ ಮಹೋತ್ಸವದ ಧ್ವಜಾರೋಹಣದಲ್ಲಿ ಪಾಲ್ಗೊಂಡರು.

300x250 AD

ವಿದ್ಯಾರ್ಥಿಗಳ ಪ್ರಭಾತಫೇರಿಯ ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮವು ನಡೆಯಿತು. ಊರ ಗಣ್ಯರು, ಹಿರಿಯರು ಪಾಲ್ಗೊಂಡು, ವಿದ್ಯಾರ್ಥಿಗಳಿಗೆ ಹಿತನುಡಿಗಳನ್ನು ತಿಳಿಸಿದರು. ಇದೇ ಸಮಯದಲ್ಲಿ ಬಿದ್ರಕಾನ ಪಂಚಾಯತದ ಸದಸ್ಯರಾದ ಜಯಂತ ಹೆಗಡೆ ಅವರು ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಪಟ್ಟಿ ಪೆನ್ನನ್ನು ನೀಡಿ, ಪ್ರೋತ್ಸಾಹಿಸಿದರು.

Share This
300x250 AD
300x250 AD
300x250 AD
Back to top