Slide
Slide
Slide
previous arrow
next arrow

ಬಕ್ಕಳದ ಪ್ರಾಥಮಿಕ ಶಾಲೆಯಲ್ಲಿ ವಿಭಿನ್ನವಾಗಿ ಅಮೃತ ಮಹೋತ್ಸವ ಆಚರಣೆ

300x250 AD

ಶಿರಸಿ: ತಾಲೂಕಿನ ಬಕ್ಕಳದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 75ನೇ ಸ್ವಾತಂತ್ರ್ಯ ದಿನಾಚರಣೆ ಅಮೃತ ಮಹೋತ್ಸವವನ್ನು ವಿಜೃಂಭಣೆಯಿಂದ ಮತ್ತು ವಿಶೇಷವಾಗಿ ಆಚರಿಸಲಾಯಿತು. ಶಾಲಾ SDMC ಅಧ್ಯಕ್ಷ ಗಣೇಶ ಹೆಗಡೆ ಧ್ವಜಾರೋಹಣ ನೆರವೇರಿಸಿ ಸರ್ವರಿಗು ಅಮೃತ ಮಹೋತ್ಸವದ ಶುಭಾಶಯ ತಿಳಿಸಿದರು. ವಿಶೇಷವಾಗಿ 75ನೇ ಸ್ವಾತಂತ್ರ್ಯೋತ್ಸವದ ನಿಮಿತ್ತ ವಿವಿಧ 75 ಸಸಿಗಳನ್ನು ನೆಡುವ ಮೂಲಕ ಮಕ್ಕಳಲ್ಲಿ ಪರಿಸರ ಪ್ರಜ್ಞೆ ಮೂಡಿಸುವದರ ಮೂಲಕ ವಿಭಿನ್ನವಾಗಿ ಅಮೃತ ಮಹೋತ್ಸವವನ್ನ ಆಚರಿಸಲಾಯಿತು. ಈ ಸಂದರ್ಭದಲ್ಲಿ ಶಾಲಾ ಮುಖ್ಯೋಪಾಧ್ಯಾಯರು ಸಹ ಶಿಕ್ಷಕರು ಮಕ್ಕಳು ಮತ್ತು SDMC ಅಧ್ಯಕ್ಷರು ಉಪ ಅಧ್ಯಕ್ಷರು ಸರ್ವ ಸದಸ್ಯರು ಪಾಲಕರು ಪೋಷಕರು ಊರ ನಾಗರಿಕರು ಹೆಚ್ಚಿನ ಸಂಖೆಯಲ್ಲಿ ಆಗಮಿಸಿ ಸ್ವಾತಂತ್ರ್ಯ ಅಮೃತ ಮಹೋತ್ಸವ ಮತ್ತು ವನ ಮಹೋತ್ಸವದಲ್ಲಿ ಉತ್ಸಾಹದಿಂದ ಭಾಗಿಯಾದರು. ನಂತರ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿತು.

300x250 AD
Share This
300x250 AD
300x250 AD
300x250 AD
Back to top