Slide
Slide
Slide
previous arrow
next arrow

ಸರ್.ಸಿವಿ ರಾಮನ್ ವಿಜ್ಞಾನ ರಸಪ್ರಶ್ನೆ: ಗೋಳಿ ಪ್ರೌಢಶಾಲೆ ದ್ವಿತೀಯ

300x250 AD

ಶಿರಸಿ:ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ ಬೆಂಗಳೂರು, ಜಿಲ್ಲಾ ಘಟಕ ಶಿರಸಿ, ವಿಜ್ಞಾನ ಮತ್ತುತಂತ್ರಜ್ಞಾನ ಇಲಾಖೆ ಶಿರಸಿ ಶೈಕ್ಷಣಿಕ ಜಿಲ್ಲೆಯ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆಯ ಸಹಯೋಗದಲ್ಲಿ ಯಲ್ಲಾಪುರದ ಹೋಲಿ ರೋಜರಿ ಪ್ರೌಢಶಾಲೆಯಲ್ಲಿ ನಡೆದ 2022:23 ನೇ ಸಾಲಿನ ಸರ್ ಸಿ ವಿ ರಾಮನ್ ವಿಜ್ಞಾನ ರಸಪ್ರಶ್ನೆ ಸ್ಪರ್ಧೆಯಲ್ಲಿ ತಾಲೂಕಿನ ಗೋಳಿಯ ಶ್ರೀ ಸಿದ್ಧಿವಿನಾಯಕ ಪ್ರೌಢಶಾಲೆ ವಿದ್ಯಾರ್ಥಿಗಳಾದ ಕುಮಾರಿ ಅನನ್ಯಾ ಮಹೇಂದ್ರ ಹೆಗಡೆ ಅಮ್ಮಚ್ಚಿ ಹಾಗೂ ಕುಮಾರ ಚೈತನ್ಯ ಗಣಪತಿ ಹೆಗಡೆ ಹೊಸ್ಮನೆ ಇವರು ಭಾಗವಹಿಸಿ ಶಿರಸಿ ಶೈಕ್ಷಣಿಕ ಜಿಲ್ಲೆಗೆ ದ್ವಿತೀಯ ಸ್ಥಾನವನ್ನು ಪಡೆದು ತಾಲೂಕಿಗೆ ಹಾಗೂ ಶಾಲೆಗೆ ಕೀರ್ತಿ ಗಳಿಸಿದ್ದಾರೆ.

ವಿದ್ಯಾರ್ಥಿಗಳ ಸಾಧನೆಗೆ ಶ್ರಿ ಸಿದ್ಧಿವಿನಾಯಕ ವಿದ್ಯಾ ಪ್ರಸಾರ ಸಮಿತಿಯ ಅಧ್ಯಕ್ಷ ಎಮ್‌ಎಲ್ ಹೆಗಡೆ ಹಲಸಿಗೆ ಹಾಗೂ ಮುಖ್ಯಾಧ್ಯಾಪಕ ನಾರಾಯಣ ದೈಮನೆ ಹಾಗೂ ಶಿಕ್ಷಕ ವೃಂದ ಅಪಾರ ಹರ್ಷ ವ್ಯಕ್ತಪಡಿಸಿದ್ದಾರೆ. ಈ ವಿದ್ಯಾರ್ಥಿಗಳಿಗೆ ವಿಜ್ಞಾನ ಶಿಕ್ಷಕರಾದ ರೂಪೇಶ ಕೆ ಚವ್ಹಾಣ ಇವರು ಮಾರ್ಗದರ್ಶನ ನೀಡಿದ್ದರು.

300x250 AD
Share This
300x250 AD
300x250 AD
300x250 AD
Back to top