• Slide
    Slide
    Slide
    previous arrow
    next arrow
  • ವಿಜ್ಞಾನ ರಸಪ್ರಶ್ನೆ ಸ್ಪರ್ಧೆ: ರಾಜ್ಯಮಟ್ಟಕ್ಕೆ ಶ್ರೀ ಚೆನ್ನಕೇಶವ ಪ್ರೌಢಶಾಲೆ

    300x250 AD

    ಹೊನ್ನಾವರ: ಕಾರವಾರದ ವಿಜ್ಞಾನ ಕೇಂದ್ರದಲ್ಲಿ ನಡೆದ ಜಿಲ್ಲಾ ಮಟ್ಟದ ವಿಜ್ಞಾನ ರಸಪ್ರಶ್ನೆ ಸ್ಪರ್ಧೆಯಲ್ಲಿ ಕರ್ಕಿಯ ಶ್ರೀ ಚೆನ್ನಕೇಶವ ಪ್ರೌಢಶಾಲೆಯ ವಿದ್ಯಾರ್ಥಿಗಳಾದ ತುಷಾರ ನಾಯ್ಕ ಮತ್ತು ಪವಿತ್ರ ನಾಯ್ಕ ಭಾಗವಹಿಸಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಲು ಅರ್ಹತೆಯನ್ನು ಪಡೆದಿದ್ದಾರೆ. ಇವರಿಗೆ ಜಿಲ್ಲಾ ಉಪಸಮನ್ವಯ ಅಧಿಕಾರಿ ಲತಾ ನಾಯಕ್ ಇವರು ಪ್ರಶಸ್ತಿ ಪತ್ರವನ್ನು ನೀಡಿ ಗೌರವಿಸಿದ್ದಾರೆ.

    ವಿದ್ಯಾರ್ಥಿಗಳ ಸಾಧನೆಗೆ ಕಾರಣರಾದ ವಿಜ್ಞಾನ ಶಿಕ್ಷಕ ಶ್ರೀಕಾಂತ ಹಿಟ್ನಳ್ಳಿ ಮತ್ತು ಕವಿತಾ ನಾಯ್ಕರಿಗೂ ಅಭಿನಂದನೆ ಸಲ್ಲುತ್ತದೆ. ವಿದ್ಯಾರ್ಥಿಗಳಿಗೂ, ಶಿಕ್ಷಕರಿಗೂ ಆಡಳಿತ ಮಂಡಳಿಯ ಅಧ್ಯಕ್ಷರು, ಮುಖ್ಯಾಧ್ಯಾಪಕರು, ಶಿಕ್ಷಣಾಧಿಕಾರಿ ಜಿ.ಎಸ್.ನಾಯ್ಕರವರು ಅಭಿನಂದನೆ ಸಲ್ಲಿಸಿ ರಾಜ್ಯ ಮಟ್ಟದಲ್ಲೂ ಸಾಧನೆ ಮಾಡಿ, ಪ್ರಥಮ ಸ್ಥಾನ ಬರುವಂತಾಗಲಿ ಎಂದು ಶುಭ ಹಾರೈಸಿದ್ದಾರೆ.

    300x250 AD
    Share This
    300x250 AD
    300x250 AD
    300x250 AD
    Leaderboard Ad
    Back to top