• Slide
    Slide
    Slide
    previous arrow
    next arrow
  • ಕುಂದರಗಿ ಗ್ರಾ.ಪಂ ವ್ಯಾಪ್ತಿಯಲ್ಲಿ ಚಿರತೆ ಓಡಾಟ

    300x250 AD

    ಯಲ್ಲಾಪುರ: ತಾಲೂಕಿನ ಕುಂದರಗಿ ಗ್ರಾ.ಪಂ ವ್ಯಾಪ್ತಿಯ ಗೌಡ್ತಿಕೊಪ್ಪ ಸುತ್ತಮುತ್ತ ಕಳೆದ ಕೆಲ ದಿವಸಗಳಿಂದ ಚಿರತೆ ಓಡಾಡುತ್ತಿದ್ದು, ಗ್ರಾಮಸ್ಥರನ್ನು ಭಯಭೀತರನ್ನಾಗಿಸಿದೆ.

    ಚಿರತೆ ಹಗಲು ಹೊತ್ತಿನಲ್ಲೂ ಕಾಣಿಸಿಕೊಳ್ಳುತ್ತಿದ್ದು, ಇದರಿಂದ ಜನತೆ ಓಡಾಡಲೂ ಭಯಪಡುವಂತಾಗಿದೆ. ಗೌಡ್ತಿಕೊಪ್ಪ, ಮಾವಿನಕಟ್ಟಾ, ಕ್ಯಾದಗಿಸರ, ಭರಣಿ ಮುಂತಾದ ಭಾಗದ ವಿದ್ಯಾರ್ಥಿಗಳು ಪ್ರತಿನಿತ್ಯ ಶಾಲೆಗೆ ಓಡಾಡುವ ರಸ್ತೆಯಲ್ಲಿ ಚಿರತೆ ಕಾಣಿಸಿಕೊಳ್ಳುತ್ತಿರುವುದರಿಂದ ಮಕ್ಕಳ ಸುರಕ್ಷತೆ ಬಗೆಗೆ ಪಾಲಕರು ಆತಂಕಪಡುವಂತಾಗಿದೆ.

    ಅಧಿಕಾರಿಗಳ ಭೇಟಿ:  ಚಿರತೆ ಓಡಾಟದ ಕುರಿತು ಗ್ರಾಮಸ್ಥರು ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಭೇಟಿ ನೀಡಿ ಗ್ರಾಮಸ್ಥರಿಗೆ ಧೈರ್ಯ ಹೇಳಿದರು. ಮಂಚಿಕೇರಿ ಅರಣ್ಯ ವಲಯದ ಅಧಿಕಾರಿಗಳು, ಸಿಬ್ಬಂದಿ ಗ್ರಾಮಸ್ಥರೊಂದಿಗೆ ಸೇರಿ ಕೂಂಬಿಂಗ್ ಕಾರ್ಯಾಚರಣೆ ನಡೆಸಿದರು. 

    300x250 AD

     ಕೂಂಬಿಂಗ್ ಕಾರ್ಯಾಚರಣೆ ನಡೆಸಲಾಗಿದ್ದು, ಇದರಿಂದ ಚಿರತೆ ಇಲ್ಲಿಂದ ಹೋಗಬಹುದೆಂದು ನಂಬಲಾಗಿದೆ. ಹೋಗದೇ ಇದ್ದಲ್ಲಿ ಪಂಜರ ಇಟ್ಟು ಕಾರ್ಯಾಚರಣೆ ನಡೆಸಲಾಗುವುದೆಂದು ಅರಣ್ಯ ಇಲಾಖೆಯವರು ಭರವಸೆ ನೀಡಿರುವುದಾಗಿ ಎಂದು ಸ್ಥಳೀಯ ಮುಖಂಡ ನಟರಾಜ ಗೌಡರ್ ಮಾಹಿತಿ ನೀಡಿದ್ದಾರೆ.

    Share This
    300x250 AD
    300x250 AD
    300x250 AD
    Leaderboard Ad
    Back to top