Slide
Slide
Slide
previous arrow
next arrow

ಸೆ.5 ರಿಂದ ಕುಷ್ಟರೋಗ ಪತ್ತೆ ಅಭಿಯಾನ

300x250 AD

ಕಾರವಾರ: ಜಿಲ್ಲೆಯಾದ್ಯಂತ ಸೆ.5ರಿಂದ 21ರವರೆಗೆ ರಾಷ್ಟ್ರೀಯ ಕುಷ್ಟರೋಗ ನಿರ್ಮೂಲನ ಕಾರ್ಯಕ್ರಮದಡಿ ಕುಷ್ಟರೋಗ ಪ್ರಕರಣಗಳ ಪತ್ತೆ ಹಚ್ಚುವ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ರಾಷ್ಟ್ರೀಯ ಕುಷ್ಟರೋಗ ನಿರ್ಮೂಲನ ಕಾರ್ಯಕ್ರಮದಡಿ ಕುಷ್ಟರೋಗ ಪ್ರಕರಣಗಳ ಪತ್ತೆ ಹಚ್ಚುವ ಅಭಿಯಾನದ ಮಾಹಿತಿ ಆರೋಗ್ಯ ಶಿಕ್ಷಣ ಸಂವಹನದ ಭಿತ್ತಿಪತ್ರ, ಬ್ಯಾನರ್ ಹಾಗೂ ಕರಪತ್ರಗಳನ್ನು ಜಿಲ್ಲಾ ಪಂಚಾಯತ್ ಸಭಾಭವನದಲ್ಲಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಿಯಾಂಗಾ ಎಂ. ಬಿಡುಗಡೆಗೊಳಿಸಿದರು.
ಈ ಅಭಿಯಾನದ ಅಂಗವಾಗಿ ಆಶಾ ಕಾರ್ಯಕರ್ತೆಯರು ಹಾಗೂ ಪುರುಷ ಸ್ವಯಂ ಸೇವಕರು ಜಿಲ್ಲೆಯಾದ್ಯಂತ ಮನೆ ಮನೆಗಳಿಗೆ ಭೇಟಿ ನೀಡಿ ಚರ್ಮರೋಗದ ತಪಾಸಣೆ ನಡೆಸಿ, ಕುಷ್ಟರೋಗದ ಲಕ್ಷಣಗಳಿರುವ ಶಂಕಿತ ಪ್ರಕರಣಗಳನ್ನು ಗುರುತಿಸಲು ಕ್ಷೇತ್ರ ಭೇಟಿ ಸಮಯದಲ್ಲಿ ತಂಡದವರಿಗೆ ಸಾರ್ವಜನಿಕರು ಸಹಕರಿಸಬೇಕು ಹಾಗೂ ತಪಾಸಣಾ ಅಭಿಯಾನ ಮುಗಿದ ನಂತರ ಶಂಕಿತ ಕುಷ್ಟರೋಗ ಲಕ್ಷಣಗಳಿರುವ ಪ್ರಕರಣಗಳನ್ನು ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ತಾಲೂಕು ಆಸ್ಪತ್ರೆಗಳಲ್ಲಿ ಶಿಬಿರಗಳನ್ನು ಏರ್ಪಡಿಸಿ, ಖಚಿತ ಕುಷ್ಟರೋಗಿಗಳಿಗೆ ಎಮ್.ಡಿ.ಟಿ ಔಷಧಿಯ ಮೂಲಕ ಚಿಕಿತ್ಸೆಯನ್ನು ನೀಡಲಾಗುತ್ತದ ಎಂದು ಆರೋಗ್ಯಾಧಿಕಾರಿಗಳು ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಶರದ ನಾಯಕ, ಜಿಲ್ಲಾ ಕುಷ್ಟರೋಗ ನಿವಾರಣಾಧಿಕಾರಿ ಡಾ.ಶಂಕರರಾವ್, ಜಿಲ್ಲಾ ಆರ್‌ಸಿಹೆಚ್‌ಒ ಡಾ.ರಮೇಶ್‌ರಾವ್, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಬಸವರಾಜ ಎಸ್.ಕನ್ನಕ್ಕನವರ, ಡಿಪಿಸಿ ಬಸವರಾಜ ಹಾಗೂ ಆರೋಗ್ಯ ಇಲಾಖೆಯ ಅಧಿಕಾರಿ, ಸಿಬ್ಬಂದಿ ಇದ್ದರು.

300x250 AD
Share This
300x250 AD
300x250 AD
300x250 AD
Back to top