• Slide
    Slide
    Slide
    previous arrow
    next arrow
  • ಉತ್ತಮ ಶಿಕ್ಷಕ ಪ್ರಶಸ್ತಿ ಪ್ರಕಟ

    300x250 AD

    ಯಲ್ಲಾಪುರ: ಶಿಕ್ಷಕರ ದಿನಾಚರಣೆಯ ಅಂಗವಾಗಿ ಶಿರಸಿ ಶೈಕ್ಷಣಿಕ ಜಿಲ್ಲಾ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲೆಯ ಉತ್ತಮ ಶಿಕ್ಷಕರು ಪ್ರಶಸ್ತಿಯನ್ನು ಪ್ರಕಟಿಸಲಾಗಿದೆ.
    ಜಿಲ್ಲಾ ಮಟ್ಟಕ್ಕೆ ತಾಲ್ಲೂಕಿನಿಂದ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಪದೋನ್ನತ ಮುಖ್ಯೋಪಾಧ್ಯಾಯರಾದ ಜಗದೀಶಚಂದ್ರ ಎಚ್.ನಾಯ್ಕರ (ಸೇವೆಗೆ ಸೇರಿದ್ದು 1994) ಹಾಗೂ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ವಜ್ರಳ್ಳಿಯ ಸಹಶಿಕ್ಷಕರಾದ ರಾಧಾ ಭಟ್ಟ (ಸೇವೆಗೆ ಸೇರಿದ್ದು 1997)ಗೆ ಪ್ರಶಸ್ತಿ ದೊರಕಿದೆ.
    ಪ್ರೌಢಶಾಲಾ ವಿಭಾಗದಲ್ಲಿ ಹೋಲಿ ರೋಜರಿ ಪ್ರೌಢಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಅಂಥೋನ್ ರೊಡ್ರಿಗಸ್ (ಸೇವೆಗೆ ಸೇರಿದ್ದು 1991) ಆಯ್ಕೆ ಮಾಡಲಾಗಿದೆ. ತಾಲೂಕಾ ಮಟ್ಟದ ಪ್ರಾಥಮಿಕ ಶಾಲಾ ಶಿಕ್ಷಕರ ಪ್ರಶಸ್ತಿಯನ್ನು ಪ್ರಕಟಿಸಲಾಗಿದ್ದು, ಕಟ್ಟಿಗೆ ಸ.ಹಿ.ಪ್ರಾ.ಶಾಲೆಯ ಮುಖ್ಯೋಪಾಧ್ಯಾಯರಾದ ಗಣಪತಿ ಕೆ.ಭಟ್ಟ, ಮಲವಳ್ಳಿ ಸ.ಹಿ.ಪ್ರಾ.ಶಾಲೆಯ ಪದೋನ್ನತ ಮುಖ್ಯೋಪಾಧ್ಯಾಯ ಸಂತೋಷ್ ಕೊಳಗೇರಿ ಹಾಗೂ ತುಂಬೆಬೀಡು ಸ.ಹಿ.ಪ್ರಾ.ಶಾಲೆಯ ಸಹಶಿಕ್ಷಕರಾದ ಪಾರ್ವತಿ ನಾಯ್ಕ ಆಯ್ಕೆಮಾಡಲಾಗಿದೆ.
    ಪ್ರೌಢಶಾಲಾ ವಿಭಾಗದಲ್ಲಿ ಕಾಳಮ್ಮನಗರ ಸ.ಪ್ರೌ.ಶಾಲೆಯ ಮುಖ್ಯೋಪಾಧ್ಯಾಯರಾದ ದೇವಿದಾಸ ಪಟಗಾರ ಹಾಗೂ ಭರತನಹಳ್ಳಿ ಪ್ರಗತಿ ವಿದ್ಯಾಲಯದ ಮುಖ್ಯೋಪಾಧ್ಯಾಯರಾದ ವಿನಾಯಕ ಹೆಗಡೆ ಇವರನ್ನು ಆಯ್ಕೆ ಮಾಡಲಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎನ್.ಆರ್.ಹೆಗಡೆ ತಿಳಿಸಿದ್ದಾರೆ.

    300x250 AD
    Share This
    300x250 AD
    300x250 AD
    300x250 AD
    Leaderboard Ad
    Back to top