• Slide
    Slide
    Slide
    previous arrow
    next arrow
  • ನೇಣಿಗೆ ಶರಣಾದ ಕಾಲೇಜು ವಿದ್ಯಾರ್ಥಿ

    300x250 AD

    ಸಿದ್ದಾಪುರ: ತಾಲೂಕಿನ ಹಾರ್ಸಿಕಟ್ಟಾ ಹತ್ತಿರದ ಹಲಸಗಾರನಲ್ಲಿ ವಿದ್ಯಾರ್ಥಿಯೋರ್ವ ನೇಣಿಗೆ ಶರಣಾದ ಘಟನೆ ನಡೆದಿದೆ.

    ಕೋಲಶಿರ್ಸಿ ಸರಕಾರಿ ಪದವಿಪೂರ್ವ ಕಾಲೇಜಿನ ಜಯಸೂರ್ಯ ನಾಯ್ಕ (17) ದ್ವಿತೀಯ ಪಿಯು ಕಲಾ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದ. ಈತ, ಉತ್ತಮ ಕ್ರೀಡಾಪಟು ಆಗಿದ್ದನು.

    300x250 AD

    ಭಾನುವಾರ ಮನೆಯಲ್ಲಿ ಯಾರು ಇಲ್ಲದ ವೇಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಘಟನೆಗೆ ಸಂಬಂಧಿಸಿದಂತೆ ಸಿದ್ದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ಮುಂದುವರೆಸಿದ್ದಾರೆ. ಈತನಿಗೆ ಕಳೆದ ಮೂರು ತಿಂಗಳುಗಳಿಂದ ವಿಪರೀತ ತಲೆನೋವು ಇತ್ತು ಎನ್ನಲಾಗಿದೆ.

    Share This
    300x250 AD
    300x250 AD
    300x250 AD
    Leaderboard Ad
    Back to top