• Slide
    Slide
    Slide
    previous arrow
    next arrow
  • ಇ- ಕೆವೈಸಿ ಮಾಡಿಸಿಕೊಳ್ಳಲು ಸೆ.14ರ ತನಕ ಗಡುವು

    300x250 AD

    ಮುಂಡಗೋಡ: ಪ್ರಧಾನಮಂತ್ರಿ ಕೃಷಿ ಸಮ್ಮಾನ ನಿಧಿ ಯೋಜನೆಯಡಿ ರೈತರಿಗೆ ಪ್ರತಿ 4 ತಿಂಗಳಿಗೊಮ್ಮೆ ರೈತರ ಖಾತೆಗೆ 2000 ರೂ. ಆರ್ಥಿಕ ನೆರವು ನೀಡಲಾಗುತ್ತಿದೆ. ಇದಕ್ಕಾಗಿ ಪಿಎಮ್ ಕಿಸಾನ್ ಪೊರ್ಟಲ್‌ನಲ್ಲಿ ಇ- ಕೆವೈಸಿ ಮಾಡಿಕೊಳ್ಳುವುದು ಕಡ್ಡಾಯವಾಗಿದೆ.
    ಇ- ಕೆವೈಸಿ ಮಾಡದ ರೈತರ ಖಾತೆಗೆ ಹಣ ವರ್ಗಾವಣೆಯಾಗುವುದಿಲ್ಲ. ಆದ್ದರಿಂದ ಪಿಎಮ್ ಕಿಸಾನ್ ಪೊರ್ಟಲ್‌ನಲ್ಲಿ ಇ- ಕೆವೈಸಿ ಮಾಡದೆ ಇರುವ ರೈತರು ಸೆ.14ರ ಒಳಗಾಗಿ ಇ- ಕೆವೈಸಿ ಮಾಡಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.
    ಗ್ರಾಮ ಒನ್ ಮತ್ತು ಕಾಮನ್ ಸರ್ವಿಸ್ ಸೆಂಟರ್ (ಸಿಎಸ್‌ಸಿ) ಜನಸೇವಾ ಕೇಂದ್ರಗಳಲ್ಲಿ ಇ- ಕೆವೈಸಿ ಮಾಡಿಸಿಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ ರೈತ ಸಂಪರ್ಕ ಕೇಂದ್ರದ ಅಧಿಕಾರಿಗಳನ್ನು ಭೇಟಿ ಮಾಡಲು ಕೃಷಿ ಸಹಾಯಕ ನಿರ್ದೇಶಕರ ಕಚೇರಿಯ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    300x250 AD
    Share This
    300x250 AD
    300x250 AD
    300x250 AD
    Leaderboard Ad
    Back to top