Slide
Slide
Slide
previous arrow
next arrow

ಸಹಾಯಕ ವ್ಯವಸ್ಥಾಪಕನಿಂದಲೇ ಬ್ಯಾಂಕ್’ಗೆ ಮೋಸ; ದೂರು ದಾಖಲು

300x250 AD

ಯಲ್ಲಾಪುರ: ಪಟ್ಟಣದ ಬ್ಯಾಂಕ್ ಆಫ್ ಬರೋಡಾ ಶಾಖೆಯ ಸಹಾಯಕ ವ್ಯವಸ್ಥಾಪಕನೇ ಬ್ಯಾಂಕಿನ ಖಾತೆಯಿಂದ ತನ್ನ ಹೆಂಡತಿಯ ಖಾತೆಗೆ 2.69 ಕೋಟಿ ರೂ ಹಣ ವರ್ಗಾವಣೆ ಮಾಡಿ ಮೋಸಗೊಳಿಸಿದ ಬಗೆಗೆ ಯಲ್ಲಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬ್ಯಾಂಕ್ ಆಫ್ ಬರೋಡಾ ಶಾಖೆಯಲ್ಲಿ ಸಹಾಯಕ ವ್ಯವಸ್ಥಾಪಕನಾಗಿರುವ ಆಂಧ್ರ ಪ್ರದೇಶ ಮೂಲದ ಕುಮಾರ ಕೃಷ್ಣಮೂರ್ತಿ ಬೋನಾಲ ಎಂಬಾತ ಕಳೆದ ಏಪ್ರಿಲ್ 7 ರಿಂದ ಸೆ.9 ರವರೆಗಿನ ಅವಧಿಯಲ್ಲಿ ಮೋಸದಿಂದ ಹಣ ವರ್ಗಾವಣೆ ಮಾಡಿದ್ದಾನೆ. ಬ್ಯಾಂಕ್ ಸಿಬ್ಬಂದಿಯ ಲಾಗಿನ್ ಅನ್ನು ಅವರ ಗಮನಕ್ಕೆ ಬಾರದಂತೆ ಉಪಯೋಗಿಸಿಕೊಂಡು ಆಂಧ್ರದ ಚಿರಲಾದ ಎಸ್.ಬಿ.ಐಯಲ್ಲಿ ಖಾತೆ ಹೊಂದಿರುವ ಪತ್ನಿ ರೇವತಿ ಪ್ರಿಯಾಂಕ ಗೊರ್ರೆಯ ಖಾತೆಗೆ 2.69 ಕೋಟಿ ರೂ ವರ್ಗಾವಣೆ ಮಾಡಿ ಮೋಸ ಮಾಡಿದ್ದಾನೆ.
ಈ ಕುರಿತು ಶಾಖಾ ವ್ಯವಸ್ಥಾಪಕ ವಿಶ್ವೇಶ್ವರ ಭಟ್ಟ ದೂರು ನೀಡಿದ್ದಾರೆ.

300x250 AD
Share This
300x250 AD
300x250 AD
300x250 AD
Back to top