Slide
Slide
Slide
previous arrow
next arrow

ಕಾಂಗ್ರೆಸ್ ಪದಾಧಿಕಾರಿಗಳ ಸಭೆ: ಬೂತ್ ಮಟ್ಟದಲ್ಲಿ ಪಕ್ಷ ಬಲಪಡಿಸಲು ಸೂಚನೆ

300x250 AD

ಅಂಕೋಲಾ: ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿ ಗೆಲ್ಲಲೇ ಬೇಕಾಗಿದೆ. ಈ ನಿಟ್ಟಿನಲ್ಲಿ ಬೂತ್ ಮಟ್ಟದಲ್ಲಿ ಪಕ್ಷವನ್ನ ಇನ್ನಷ್ಟು ಬಲಪಡಿಸುವಂತೆ ಕೆಪಿಸಿಸಿ ಉಸ್ತುವಾರಿಗಳು ಸೂಚನೆ ನೀಡಿದರು.

ಸೋಮವಾರ ಕಾರವಾರ- ಅಂಕೋಲಾ ತಾಲೂಕಿನ ಬ್ಲಾಕ್ ಕಾಂಗ್ರೆಸ್ ಸಭೆಯನ್ನ ಪಟ್ಟಣದ ನಾಡವರ ಸಮುದಾಯ ಭವನದಲ್ಲಿ ಹಮ್ಮಿಕೊಂಡಿದ್ದು, ಕೆಪಿಸಿಸಿ ಉಸ್ತುವಾರಿಗಳಾಗಿ ಆಗಮಿಸಿದ್ದ ನವೀನ್ ಚಂದ್ರ ಶೆಟ್ಟಿ, ಮುರುಳಿ ಶೆಟ್ಟಿ, ಪ್ರಕಾಶ್ ಪಾಟೀಲ್, ನೇತೃತ್ವದಲ್ಲಿ ಸಭೆ ನಡೆಸಲಾಯಿತು. ಸಭೆಯಲ್ಲಿ ಡಿಸೆಂಬರ್ ಓಳಗೆ ಭೂತ್ ಕಮಿಟಿ ಹಾಗೂ ವಾರ್ಡ್ ಕಮಿಟಿಯನ್ನ ನೇಮಕ ಮಾಡಬೇಕು. ನಂತರ ಕುದ್ದಾಗಿ ಪ್ರತಿ ಭೂತ್ ಮಟ್ಟಕ್ಕೆ ಭೇಟಿ ನೀಡಿ ಪಕ್ಷ ಸಂಘಟನೆಗೆ ಯಾವ ರೀತಿ ಕೆಲಸ ಮಾಡುವಂತೆ ಸೂಚನೆ ನೀಡಲಾಗುವುದು ಎಂದಿದ್ದಾರೆ. ಕಾಂಗ್ರೆಸ್ ಪಕ್ಷ ಭಾರತ್ ಜೋಡೋ ಯಾತ್ರೆಯನ್ನ ನಡೆಸುತ್ತಿದ್ದು ಜಿಲ್ಲೆಯಲ್ಲಿ ಯಾತ್ರೆ ಯಶಸ್ವಿಗೆ ಎಲ್ಲರೂ ಕೈ ಜೋಡಿಸುವಂತೆ ತಿಳಿಸಿದ್ದಾರೆ.

300x250 AD

ಸಭೆಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಭೀಮಣ್ಣ ನಾಯ್ಕ, ಮಾಜಿ ಶಾಸಕ ಸತೀಶ್ ಸೈಲ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಮಾನಂದ ನಾಯಕ, ಕಲಗೋಡ ರತ್ನಾಕರ, ಅಂಕೋಲಾ ಉಸ್ತುವಾರಿ ಡಿ.ಎನ್ ಗಾಂವಕರ್, ಕಾರವಾರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಮೀರ್ ನಾಯ್ಕ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.

Share This
300x250 AD
300x250 AD
300x250 AD
Back to top