Slide
Slide
Slide
previous arrow
next arrow

ಭಾರಿ ಮಳೆಗೆ ಕೊಚ್ಚಿ ಹೋದ ಸೇತುವೆ: ಸಂಪರ್ಕ ಕಡಿತ

300x250 AD

ಹೊನ್ನಾವರ: ಎಡಬಿಡದೆ ಸುರಿಯುತ್ತಿರುವ ಮಳೆಯು ಒಂದಿಲ್ಲೊಂದು ಅನಾಹುತವನ್ನು ಸೃಷ್ಟಿ ಮಾಡುತ್ತಿದೆ. ಹಳ್ಳ ಕೊಳ್ಳಗಳು ತುಂಬಿ ಹರಿದು ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಭಾರೀ ಮಳೆಯಿಂದಾಗಿ ತಾಲೂಕಿನ ಚಂದಾವರ ಗ್ರಾ.ಪಂ ವ್ಯಾಪ್ತಿಯ ಟೇಬ್ರಿ ಹಳ್ಳದ ಸೇತುವೆ ಕೊಚ್ಚಿಹೋಗಿದ್ದು, ವಾಹನ ಸವಾರರು ಪರದಾಡುವಂತಾಗಿದೆ

ಕುಮಟಾ, ಚಂದಾವರ ಮಾರ್ಗವಾಗಿ ಸಾಂತಗಲ್, ಬಡಾಳ, ಸಿದ್ದಾಪುರಕ್ಕೆ ಸಂಪರ್ಕ ಕಲ್ಪಿಸುವ ಮುಖ್ಯ ರಸ್ತೆ ಇದಾಗಿದೆ. ತಾಲೂಕಿನಲ್ಲಿ ಸುರಿದ ಭಾರೀ ಮಳೆಗೆ ಸೇತುವೆ ಕೊಚ್ಚಿ ಹೋಗಿದೆ. ವಾಹನ ಸವಾರರು ಹಾಗೂ ಸ್ಥಳೀಯರು ಕೊಚ್ಚಿಹೋದ ಹೊಂಡಗಳಿಗೆ ಕಲ್ಲು-ಮಣ್ಣು ತುಂಬಿ ಸಂಚಾರಕ್ಕೆ ಅನುವುಮಾಡಿಕೊಟ್ಟಿದ್ದಾರೆ. ಇನ್ನು ಸೇತುವೆ ಎರಡು ಬದುಗಳಲ್ಲಿ ಕಬ್ಬಿಣದ ತಡೆಗೋಡೆ ನಿರ್ಮಿಸಿದ್ದರು. ನೀರಿನ ರಭಸಕ್ಕೆ ತಡೆಗೋಡೆಯೂ ನಾಪತ್ತೆಯಾಗಿದೆ. ಈ ಬಗ್ಗೆ ಸಂಬಂಧಿಸಿದ ಜನಪ್ರತಿನಿಧಿಗಳು ಗಮನಹರಿಸಿ ನೂತನ ಸೇತುವೆ ನಿರ್ಮಾಣಕ್ಕೆ ಮುಂದಾಗಬೇಕಿದೆ.

300x250 AD
Share This
300x250 AD
300x250 AD
300x250 AD
Back to top