Slide
Slide
Slide
previous arrow
next arrow

ವಿದ್ಯುತ್ ತಗುಲಿ ಯುವಕ ದುರ್ಮರಣ: ಮುಗಿಲು ಮುಟ್ಟಿದ ಕುಟುಂಬದ ಆಕ್ರಂದನ

300x250 AD

ಶಿರಸಿ: ತಾಲೂಕಿನ ಹುಲೇಕಲ್ ಪಂಚಾಯಿತಿ ವ್ಯಾಪ್ತಿಯ ಬಾದುಂಬೆ ಗ್ರಾಮದ ಯುವಕನೋರ್ವ ವಿದ್ಯುತ್ ತಂತಿ ತಗುಲಿ ಸ್ಥಳದಲ್ಲೇ ಮೃತಪಟ್ಟ ಹೃದಯ ವಿದ್ರಾವಕ ಘಟನೆ ನಡೆದಿದೆ.
35 ವರ್ಷದ ಲೋಕೇಶ್ ನಾಯ್ಕ್ ಎಂಬಾತನೇ ಅಸುನೀಗಿದ ವ್ಯಕ್ತಿಯಾಗಿದ್ದು, ಸೆ.14 ಬುಧವಾರ ಮಧ್ಯಾಹ್ನ ತೋಟದ ಕೆಲಸಕ್ಕೆಂದು ಹೋದಾಗ ಈ ಅವಘಡ ಸಂಭವಿಸಿದೆ. ನಗರದ ರಾಘವೇಂದ್ರ ಸರ್ಕಲ್ ಬಳಿ ಚಿಕನ್ ಶಾಪ್ ಇಟ್ಟುಕೊಂಡಿದ್ದ ಈತನ ಅಕಾಲಿಕ ಮರಣವು ಕುಟುಂಬಕ್ಕೆ ಬರಸಿಡಿಲು ಎರಗಿದಂತಾಗಿದೆ.

ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಶಿರಸಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

300x250 AD
Share This
300x250 AD
300x250 AD
300x250 AD
Back to top