• Slide
    Slide
    Slide
    previous arrow
    next arrow
  • ಸಮಗ್ರ ತೋಟಗಾರಿಕೆ ಬೆಳೆಗಳ ಮಾಹಿತಿ ಕಾರ್ಯಕ್ರಮ

    300x250 AD

    ಸಿದ್ದಾಪುರ: ತಾಲೂಕಿನ ಹೇರೂರುನಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್, ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಹೇರೂರು ಮತ್ತು ತಟ್ಟಿಕೈ ಸಹಕಾರದೊಂದಿಗೆ ಸಮಗ್ರ ತೋಟಗಾರಿಕೆ ಬೆಳೆಗಳ ಬಗ್ಗೆ ಮಾಹಿತಿ ಕಾರ್ಯಕ್ರಮ ನಡೆಯಿತು.

    ಕಾರ್ಯಕ್ರಮದಲ್ಲಿ ಪ್ರಗತಿಪರ ಕೃಷಿಕ ಶಂಕರ್ ಭಟ್ ಅವರು ಸಮಗ್ರ ತೋಟಗಾರಿಕೆ ಬೆಳೆ ಬಗ್ಗೆ ಇಲಾಖೆಯಲ್ಲಿ ಸಿಗುವ ಸೌಲಭ್ಯದ, ಕೃಷಿ ಹಾಗೂ ಕೃಷಿಯೇತರ ಚಟುವಟಿಕೆಗಳ ಅನುಷ್ಠಾನದ ಬಗ್ಗೆ ಸಮಗ್ರವಾದ ಮಾಹಿತಿ ನೀಡಿದರು.

    300x250 AD

    ಕಾರ್ಯಕ್ರಮದಲ್ಲಿ ಒಕ್ಕೂಟದ ಅಧ್ಯಕ್ಷ ರತ್ನಾಕರ ನಾಯ್ಕ್, ತಿಮ್ಮಪ್ಪ ಗೌಡ, ಕೃಷಿ ಮೇಲ್ವಿಚಾರಕ ಮಹಾದೇವ ಬಿ., ಸೇವಾಪ್ರತಿನಿಧಿಗಳಾದ ಪ್ರೀತಿ ಮತ್ತು ಸೌಭಾಗ್ಯ, ಊರಿನ ಹಿರಿಯರು, ಸಂಘದ ಸದಸ್ಯರು ಉಪಸ್ಥಿತರಿದ್ದರು.

    Share This
    300x250 AD
    300x250 AD
    300x250 AD
    Leaderboard Ad
    Back to top