• Slide
    Slide
    Slide
    previous arrow
    next arrow
  • ಮನೆಯಲ್ಲಿ ಅಗ್ನಿ ಅವಘಡ: ಸುಟ್ಟು ಕರಕಲಾದ ಸಾಮಾನು-ಸರಂಜಾಮು

    300x250 AD

    ದಾಂಡೇಲಿ: ನಗರದ ಮಾರುತಿ ನಗರದ ಮನೆಯೊಂದರಲ್ಲಿ ಅಗ್ನಿ ಅವಘಢ ಸಂಭವಿಸಿ ಅಪಾರ ಹಾನಿಯಾದ ಘಟನೆ ನಡೆದಿದೆ.
    ಮಾರುತಿ ನಗರದ ನಿವಾಸಿ ಮಂಜುನಾಥ ಪಡವಳ್ಳಿ ಎಂಬುವವರ ಮನೆ ಬೆಂಕಿಗಾಹುತಿಯಾಗಿದೆ. ತನ್ನ ಮೃತ ತಾಯಿಯ ಅಂತಿಮ ವಿಧಿವಿಧಾನಗಳ ಕಾರ್ಯಕ್ಕಾಗಿ ಮನೆಯವರೆಲ್ಲರೂ ಬೈಲಹೊಂಗಲಕ್ಕೆ ಹೋಗಿದ್ದರೆನ್ನಲಾಗಿದೆ. ಘಟನೆಗೆ ಕಾರಣ ವಿದ್ಯುತ್ ಶಾರ್ಟ್ ಸರ್ಕೀಟ್ ಆಗಿರಬಹುದೆಂದು ಅಂದಾಜಿಸಲಾಗಿದೆ.
    ಮನೆಯಲ್ಲಿ ಯಾರೂ ಇಲ್ಲದಿರುವುದರಿಂದ ತಕ್ಷಣಕ್ಕೆ ಬೆಂಕಿ ಅವಘಡ ಸಂಭವಿಸಿರುವುದು ಯಾರ ಗಮನಕ್ಕೂ ಬಂದಿರಲಿಲ್ಲ. ಹೊಗೆ ಕಾಣಿಸಿಕೊಳ್ಳುತ್ತಿದ್ದಂತೆಯೆ ಅಕ್ಕಪಕ್ಕದ ಮನೆಯವರೆಲ್ಲರೂ ಸೇರಿ ಬೆಂಕಿ ನಂದಿಸುವ ಕಾರ್ಯ ಮಾಡಿದ್ದಾರೆ. ಕೂಡಲೆ ನಗರ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಅಗ್ನಿಶಾಮಕ ದಳದವರು ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸುವ ಕಾರ್ಯಕ್ಕೆ ಸಹಕರಿಸಿದ್ದಾರೆ. ಅಗ್ನಿ ಅವಘಡದಿಂದ ಮನೆಯಲ್ಲಿದ್ದ ಸಾಮಾನು ಸರಂಜಾಮುಗಳು ಸಂಪೂರ್ಣ ಸುಟ್ಟು ಕರಕಲಾಗಿದೆ. ಮೊದಲೆ ತಾಯಿಯನ್ನು ಕಳೆದುಕೊಂಡ ನೋವಿನ ನಡುವೆ ಮತ್ತೊಂದು ಅವಘಡ ಮಂಜುನಾಥ ಪಡವಳ್ಳಿಯವರ ಕುಟುಂಬವನ್ನು ಮತ್ತಷ್ಟು ಸಂಕಷ್ಟಕ್ಕೆ ತಳ್ಳಿದೆ.

    300x250 AD
    Share This
    300x250 AD
    300x250 AD
    300x250 AD
    Leaderboard Ad
    Back to top