Slide
Slide
Slide
previous arrow
next arrow

ಸಾಲ ಸೌಲಭ್ಯಕ್ಕಾಗಿ ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ

300x250 AD

ಕಾರವಾರ: 2022-23ನೇ ಸಾಲಿನ ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ, ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ, ಕರ್ನಾಟಕ ತಾಂಡ ಅಭಿವೃದ್ಧಿ ನಿಗಮ, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ, ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ, ಪರಿಶಿಷ್ಟ ಜಾತಿ ಹಾಗು ಪರಿಶಿಷ್ಟ ಪಂಗಡಗಳ ಜಾತಿಅಲೆಮಾರಿ ಅರೆ ಅಲೆಮಾರಿ ಸೂಕ್ಷ್ಮ ಅತಿ ಸೂಕ್ಷ್ಮ ಸಮುದಾಯಗಳ ಅಭಿವೃದ್ಧಿ ಕೋಶ, ಅಲೆಮಾರಿ ಮತ್ತು ಕರ್ಣಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮಗಳಡಿಯಲ್ಲಿ ನೀಡಲಾಗುತ್ತಿರುವ ವಿವಿಧ ಯೋಜನೆಗಳ ಸಾಲ ಸೌಲಭ್ಯಕ್ಕಾಗಿ ಅರ್ಜಿ ಸಲ್ಲಿಸಲು ಸೆ. 30 ರ ವರೆಗೆ ಅವಧಿ ವಿಸ್ತರಿಸಲಾಗಿದೆ.
ಆಸಕ್ತ ಅಭ್ಯರ್ಥಿಗಳು ಗ್ರಾಮ ಒನ್ ಹಾಗೂ ಆಯಾ ತಾಲೂಕು ವ್ಯಾಪ್ತಿಯಲ್ಲಿನ ಕರ್ನಾಟಕ ಒನ್ ಕೇಂದ್ರದಲ್ಲಿ ಸೇವಾಸಿಂಧು ವೆಬ್‌ಸೈಟ್ https://sevasindhu.karnataka.gov.in/ ಮೂಲಕ ಅರ್ಜಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರ ದೂರವಾಣಿ ಸಂಖ್ಯೆ 08382226903, ನಿಗಮಗಳ ವೆಬ್ ಸೈಟ್ ಅಥವಾ ಕಲ್ಯಾಣ ಮಿತ್ರ ಏಕೀಕೃತ ಎಸ್.ಸಿ/ ಎಸ್.ಟಿ ದೂರವಾಣಿ ಸಂಖ್ಯೆ 9482300400 ಗೆ ಸಂಪರ್ಕಿಸಿ ಎಂದು ಕಾರವಾರ ಡಾ. ಬಿ.ಅಂಬೇಡ್ಕರ ಅಭಿವೃದ್ಧಿ ನಿಯಮಿತ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top