Slide
Slide
Slide
previous arrow
next arrow

ಜಿಲ್ಲೆಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣಕ್ಕೆ ಸರ್ಕಾರದಿಂದ ಗ್ರೀನ್ ಸಿಗ್ನಲ್

300x250 AD

ಬೆಂಗಳೂರು: ಉತ್ತರಕನ್ನಡ ಜಿಲ್ಲೆಯ ಜನರ ಬಹುವರ್ಷಗಳ ಬೇಡಿಕೆ ಕೊನೆಗೂ ಈಡೇರುವ ಕಾಲ ಸನ್ನಿಹಿತವಾಗಿದೆ. ಜಿಲ್ಲೆಗೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಬೇಕು ಎಂಬ ಕೂಗಿಗೆ ಸರ್ಕಾರ ಕೊನೆಗೂ ಒಪ್ಪಿಗೆ ನೀಡಿದೆ.

ಆರೋಗ್ಯ ಸಚಿವ ಡಾ.ಸುಧಾಕರ್ ನೇತೃತ್ವದಲ್ಲಿ ಉತ್ತರ ಕನ್ನಡ ಜಿಲ್ಲಾ ಶಾಸಕರ ಸಭೆ ನಡೆದಿದ್ದು, ಸಭೆಯಲ್ಲಿ ಶಾಸಕರ ಒತ್ತಡಕ್ಕೆ ಮಣಿದು ಜಿಲ್ಲೆಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಿಸಲು ಸಮ್ಮತಿ ಸೂಚಿಸಿದ್ದಾರೆ.

300x250 AD

ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಸುಧಾಕರ್, ಉತ್ತರ ಕನ್ನಡ ಜಿಲ್ಲೆಗೆ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಿಸಲು ಸರ್ಕಾರ ಬದ್ಧವಾಗಿದೆ. ಸುಸಜ್ಜಿತವಾದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣವಾಗಲಿದೆ. ಈ ಕುರಿತು ಆರ್ಥಿಕ ಇಲಾಖೆಗೆ ಕಡತ ರವಾನಿಸಲಾಗಿದೆ. ಆಸ್ಪತ್ರೆ ನಿರ್ಮಾಣದ ಸ್ಥಳದ ಬಗ್ಗೆ ಇನ್ನೂ ಸ್ಥಳ ನಿಗದಿಯಾಗಿಲ್ಲ. ಅಧಿವೇಶನದ ಬಳಿಕ ನಾನು ಹಾಗೂ ಸಿಎಂ ಬಸವರಾಜ್ ಬೊಮ್ಮಾಯಿ ಜಿಲ್ಲೆಗೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸುವುದಾಗಿ ತಿಳಿಸಿದರು.

Share This
300x250 AD
300x250 AD
300x250 AD
Back to top