Slide
Slide
Slide
previous arrow
next arrow

ದೊಡ್ಮನೆಯಲ್ಲಿ ಸೆ.25ರಂದು ಅರಣ್ಯ ಅತಿಕ್ರಮಣದಾರರ ಸಭೆ

300x250 AD

ಸಿದ್ಧಾಪುರ: ಅರಣ್ಯ ಅತಿಕ್ರಮಣದಾರ ಮಾಹಿತಿ ಜಾಗೃತ ಕಾರ್ಯಕ್ರಮ ಸಿದ್ಧಾಪುರ ತಾಲೂಕ, ದೊಡ್ಮನೆ ಗ್ರಾಮ ಪಂಚಾಯತ ವ್ಯಾಪ್ತಿಯ ಅರಣ್ಯ ಅತಿಕ್ರಮಣದಾರರ ಸಭೆ ಸೆ.25 ಆದಿತ್ಯವಾರ ಮಧ್ಯಾಹ್ನ 3.30ಕ್ಕೆ ದೊಡ್ಮನೆ ಗ್ರಾಮ ಪಂಚಾಯತ ಸಭಾಂಗಣದಲ್ಲಿ ಕರೆಯಲಾಗಿದೆ ಎಂದು ಜಿಲ್ಲಾ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ಅಧ್ಯಕ್ಷ ರವೀಂದ್ರ ನಾಯ್ಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
  ಪರಿಸರವಾದಿಗಳು ಅರಣ್ಯ ಹಕ್ಕು ಕಾಯಿದೆ ಅಡಿಯಲ್ಲಿ ತೀರಸ್ಕಾರವಾಗಿರುವ ಅರಣ್ಯವಾಸಿಗಳನ್ನ ಒಕ್ಕಲೆಬ್ಬಿಸಬೇಕೆಂದು ಸುಫ್ರೀಂ ಕೋರ್ಟನಲ್ಲಿ ದಾಖಲಿಸಿದ ಸಾರ್ವಜನಿಕ ಹಿತಾಸಕ್ತಿಯ ಅರ್ಜಿ ಅಂತಿಮ ವಿಚಾರಣೆ ಜರಗುತ್ತಿರುವ ಮಾಹಿತಿ, ಅರಣ್ಯವಾಸಿಗಳ ಅರ್ಜಿಯನ್ನ ಕಾನೂನಿಗೆ ವ್ಯತಿರಿಕ್ತವಾಗಿ ವಿಳೆಮಾಡುತ್ತಿರುವ, ಅರಣ್ಯವಾಸಿಗಳ ಪರವಾಗಿ ಸುಫ್ರೀಂ ಕೋರ್ಟನಲ್ಲಿ ತಿದ್ದುಪಡಿ ಪ್ರಮಾಣ ಪತ್ರ ಸಲ್ಲಿಸಲು ವಿಧಾನ ಸಭೆಯಲ್ಲಿ ತೀರ್ಮಾನಿಸಲು ಸರಕಾರಕ್ಕೆ ಅಗ್ರಹಿಸಲಾದ ಹಾಗೂ ಅರಣ್ಯ ಸಿಬ್ಬಂದಿಗಳ ದೌರ್ಜನ್ಯ ಕುರಿತು ಸಭೆಯಲ್ಲಿ ಚರ್ಚಿಸಲಾಗುವುದೆಂದು ತಿಳಿಸಿದ್ದಾರೆ.
  ಆಸಕ್ತ ಅರಣ್ಯ ಅತಿಕ್ರಮಣದಾರರು ಸದ್ರಿ ಕಾರ್ಯಕ್ರಮಕ್ಕೆ ಆಗಮಿಸಲು ಜಿಲ್ಲಾಧ್ಯಕ್ಷ ರವೀಂದ್ರ ನಾಯ್ಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top