Slide
Slide
Slide
previous arrow
next arrow

ದಸರಾ ಕ್ರೀಡಾಕೂಟ: ರಾಜ್ಯಮಟ್ಟಕ್ಕೆ ನಿವೇದಿತಾ ಸಾವಂತ್

300x250 AD

ಕಾರವಾರ: ಧಾರವಾಡದ ಆರ್.ಎನ್.ಶೆಟ್ಟಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಬೆಳಗಾವಿ ವಿಭಾಗ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಉತ್ತರ ಕನ್ನಡ ಜಿಲ್ಲೆಯಿಂದ ಸ್ಪರ್ಧಿಸಿದ್ದ ನಿವೇದಿತಾ ಸಾವಂತ, 13.42 ಮೀಟರ್ ದೂರಕ್ಕೆ ಗುಂಡು ಎಸೆಯುವ ಮೂಲಕ ಹಾಗೂ 41.34 ಮೀಟರ್‌ಗೆ ಡಿಸ್ಕಸ್ ಎಸೆಯುವ ಮೂಲಕ ಎರಡೂ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ.

ಈ ಮೂಲಕ ಎರಡು ಚಿನ್ನದ ಪದಕಗಳನ್ನು ಪಡೆದು, ಇದೇ ಬರುವ 25ರಿಂದ ಮೈಸೂರಿನ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ನಡೆಯುವ ರಾಜ್ಯಮಟ್ಟದ ದಸರಾ ಕ್ರೀಡಾಕೂಟದಲ್ಲಿ ಉತ್ತರ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಲಿದ್ದಾಳೆ.

300x250 AD

ಡಿಸ್ಕಸ್ ಎಸೆತ ಸ್ಪರ್ಧೆಯಲ್ಲಿ ರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿರುವ ನಿವೇದಿತಾ, ಈ ಹಿಂದೆ ರಾಜ್ಯ ಮಟ್ಟದ ದಸರಾ ಕ್ರೀಡಾಕೂಟದಲ್ಲಿಯೂ ಚಿನ್ನದ ಪದಕಗಳನ್ನು ಪಡೆದು ಸಾದನೆ ಮಾಡಿದ್ದರು. ಇತ್ತೀಚಿಗೆ ಬೆಂಗಳೂರಿನ ಕಂಠರವ ಕ್ರೀಡಾಂಗಣದಲ್ಲಿ ನಡೆದ ಮುಕ್ತ ಮಹಿಳೆಯರ ಡಿಸ್ಕಸ್ ಎಸೆತ ಸ್ಪರ್ಧೆಯಲ್ಲಿ ನಿವೇದಿತಾ ಚಿನ್ನದ ಪದಕವನ್ನು ಪಡೆದಿದ್ದು, ಈ ಬಾರಿ ರಾಜ್ಯಮಟ್ಟದ ದಸರಾ ಕ್ರೀಡಾಕೂಟದಲ್ಲಿ ಪದಕ ಗೆಲ್ಲುವ ವಿಶ್ವಾಸ ಹೊಂದಿದ್ದಾರೆ. ಕಾರವಾರದ ಅಥ್ಲೆಟಿಕ್ಸ್ ತರಬೆತುದಾರ ಪ್ರಕಾಶ ರೇವಣಕರ ಅವರಿಗೆ ತರಬೇತಿ ನೀಡಿದ್ದಾರೆ. ನಿವೇದಿತಾ ಕ್ರೀಡಾ ಕೋಟಾದಡಿಯಲ್ಲಿ ಮೆಕ್ಯಾನಿಕಲ್ ಇಂಜಿನಿಯರಿAಗ್ ಪದವಿ ಪಡೆದು ಪ್ರಸ್ತುತ ಟಿಸಿಎಸ್‌ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

Share This
300x250 AD
300x250 AD
300x250 AD
Back to top