Slide
Slide
Slide
previous arrow
next arrow

ಹುಬ್ಬಳ್ಳಿ-ಅಂಕೋಲಾ ರೈಲ್ವೆ ಯೋಜನೆ:ಕೇಂದ್ರ ಸರ್ಕಾರ ಸಮಿತಿಯಿಂದ ಪರಿಶೀಲನೆ

300x250 AD

ಯೆಲ್ಲಾಪುರ: ದಶಕಗಳಿಂದ ನೆನೆಗುದಿಗೆ ಬಿದ್ದಿರುವ ಹುಬ್ಬಳ್ಳಿ-ಅಂಕೋಲಾ ರೈಲ್ವೆ ಯೋಜನೆ ಅನೇಕ ಎಡರು-ತೊಡರುಗಳನ್ನು ದಾಟಿ ಕೊನೆಗೂ ನಿರ್ಣಾಯಕ ಘಟ್ಟ ತಲುಪಿದಂತಿದೆ.
ಕೇಂದ್ರ ಸರ್ಕಾರ ಸಮಿತಿಯೊಂದನ್ನು ರಚಿಸಿದ್ದು ಸಮಿತಿಯು ಸ್ಥಗಿತಗೊಂಡಿರುವ ಹುಬ್ಬಳ್ಳಿ-ಅಂಕೋಲಾ ರೈಲು ಯೋಜನೆಯ ಮಾರ್ಗ ಪರಿಶೀಲನೆ ಹಾಗೂ ಸಾರ್ವಜನಿಕ ಅಹವಾಲು ಸ್ವೀಕರಿಸುವ ಕಾರ್ಯ ಕೈಗೊಳ್ಳುತ್ತಿದೆ. ಅದರಂತೆ ಯಲ್ಲಾಪುರ ತಾಲೂಕಿನಲ್ಲಿ ಹಾದು ಹೋಗುವ ರೈಲ್ವೆ ಮಾರ್ಗದ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿತು.
ಕೇಂದ್ರದಿಂದ ಆಗಮಿಸಿದ ತಂಡವು ಅರಬೈಲು ಘಟ್ಟ ಪ್ರದೇಶ , ಭೂಕುಸಿತವಾದ ತಳಕೇಬೈಲು, ಬಾಸಲ್‌ನ ಚಿಟಕೇಬೈಲ ಇನ್ನಿತರ ಸ್ಥಳಗಳಲ್ಲಿ ಪರಿಶೀಲನೆ ನಡೆಸಿತು.
ಸಮಿತಿಯ ಸದಸ್ಯರು ಮಾಧ್ಯಮದವರೊಂದಿಗೆ ಏನನ್ನೂ ಹಂಚಿಕೊಳ್ಳದೇ ತಮ್ಮ ಪರಿಶೀಲನಾ ಕಾರ್ಯ ಕೈಗೊಂಡು ಮುಕ್ತಾಯಗೊಳಿಸಿ ಮರಳಿದರು.

300x250 AD
Share This
300x250 AD
300x250 AD
300x250 AD
Back to top