Slide
Slide
Slide
previous arrow
next arrow

ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ: ಆರೋಗ್ಯ ಸಚಿವರಿಂದ ಅ.11ಕ್ಕೆ ಸ್ಥಳ ಪರಿಶೀಲನೆ

300x250 AD

ಕಾರವಾರ: ಉತ್ತರಕನ್ನಡ ಜಿಲ್ಲೆಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣದ ಭರವಸೆಯನ್ನು ಸರ್ಕಾರ ನೀಡಿದ ಬೆನ್ನಲ್ಲೆ ಇದೀಗ, ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಸ್ಥಳ ಪರಿಶೀಲನೆ ಮಾಡಲು ಆರೋಗ್ಯ ಸಚಿವ ಡಾ. ಸುಧಾಕರ ಅ.11 ರಂದು ಕಾರವಾರಕ್ಕೆ ಆಗಮಿಸಲಿದ್ದಾರೆ. ಯಾವ ಸ್ಥಳದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ಮಾಡಬೇಕು ಎಂಬುದರ ಕುರಿತು ಸ್ಥಳ ಪರಿಶೀಲನೆ ನಡೆಸಲಿದ್ದು. ಈ ವೇಳೆ ಜಾಗ ಬಹುತೇಕ ಅಂತಿಮಗೊಳ್ಳುವ ಸಾಧ್ಯತೆಯಿದೆ ಎಂದು ಶಾಸಕಿ ರೂಪಾಲಿ ಎಸ್ ನಾಯ್ಕ ಮಾಹಿತಿ ನೀಡಿದ್ದಾರೆ.
ಇದೇ ವೇಳೆ, ಕಾರವಾರದ ಮೆಡಿಕಲ್ ಕಾಲೇಜಿಗೆ ಆಗಮಿಸಿ 160 ಕೋಟಿ ರೂಪಾಯಿ ವೆಚ್ಚದ 450 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆಗೆ ಶಿಲಾನ್ಯಾಸ ನೆರವೇರಿಸಲಿದ್ದು ಮೆಡಿಕಲ್ ಕಾಲೇಜಿನಲ್ಲಿ ವಿವಿಧ ಉನ್ನತ ವೈದ್ಯಕೀಯ ಸೌಲಭ್ಯ ಕಲ್ಪಿಸುವ ಕುರಿತು ಅಧಿಕಾರಿಗಳ ಜೊತೆ ಸಭೆ ನಡೆಸಲಿದ್ದಾರೆ. ವಿಧಾನಸಭಾ ಅಧಿವೇಶನದಲ್ಲಿ ಜಿಲ್ಲೆಯ ಎಲ್ಲಾ ಶಾಸಕರು , ಉತ್ತರಕನ್ನಡ ಜಿಲ್ಲೆಗೆ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಬೇಕು ಎಂದು ಆಗ್ರಹಿಸಿ, ಇಲ್ಲಿನ ಸಮಸ್ಯೆಗಳ ಬಗ್ಗೆ ಗಮನಸೆಳೆದಿದ್ದರು. ಈ ವೇಳೆ ಸಿಎಂ ಮತ್ತು ಆರೋಗ್ಯ ಸಚಿವರು, ಆಸ್ಪತ್ರೆಗೆ ನಿರ್ಮಿಸುವ ಭರವಸೆ ನೀಡಿ, ಸ್ಥಳ ಪರಿಶೀಲನೆಗೆ ಆಗಮಿಸುವುದಾಗಿ ತಿಳಿಸಿದ್ದರು.

300x250 AD
Share This
300x250 AD
300x250 AD
300x250 AD
Back to top