Slide
Slide
Slide
previous arrow
next arrow

ಸಚಿವ ಹೆಬ್ಬಾರರಿಂದ ಉದ್ದೇಶಿತ ಸಿಟಿ ಬಸ್ ನಿಲ್ದಾಣ ಸ್ಥಳ ಪರಿಶೀಲನೆ

300x250 AD

ಯಲ್ಲಾಪುರ: ಪಟ್ಟಣದ ಶ್ರೀಲಕ್ಷ್ಮಿ ವೆಂಕಟರಮಣ ಮಠದ ಮುಂಭಾಗದ ರಾಷ್ಟ್ರೀಯ ಹೆದ್ದಾರಿ 63ಪಕ್ಕದಲ್ಲಿ ಪಟ್ಟಣ ಪಂಚಾಯತ ವತಿಯಿಂದ ಸಿಟಿ ಬಸ್ ನಿಲ್ದಾಣವನ್ನು ನಿರ್ಮಾಣ ಮಾಡಲು ಉದ್ದೇಶಿಸಿರುವ ಸ್ಥಳಕ್ಕೆ ಮಂಗಳವಾರ ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ಭೇಟಿ ನೀಡಿ ಸ್ಥಳ ಪರಿಶೀಲಿಸಿದರು.

ಕೆಲವೇ ತಿಂಗಳಲ್ಲಿ ಗ್ರಾಮದೇವಿ ಜಾತ್ರೆ ಬರಲಿದ್ದು, ಮುಖ್ಯ ಬಸ್ ನಿಲ್ದಾಣಕ್ಕೆ ಒತ್ತಡ ಹೆಚ್ಚಾಗುತ್ತದೆ. ಹಳಿಯಾಳ ಕಲಘಟಗಿ, ಹುಬ್ಬಳ್ಳಿ ದಾಂಡೇಲಿ ಕಡೆಯಿಂದ ಬರುವ ಜನರಿಗೆ ಸೂಕ್ತ ಬಸ್ ನಿಲ್ದಾಣವಾಗಲಿದೆ ಎನ್ನುವ ನಿಟ್ಟಿನಲ್ಲಿ ಯಲ್ಲಾಪುರದ ಹುಬ್ಬಳ್ಳಿ ರಸ್ತೆಯ ಬಸ್ ನಿಲ್ದಾಣವನ್ನು ಸೆಟೆಲೈಟ್ ಬಸ್ ನಿಲ್ದಾಣವಾಗಿ ನಿರ್ಮಾಣ ಮಾಡಲು ಉದ್ದೇಶಿಸಲಾಗಿದೆ ಈ ಕಾರಣಕ್ಕಾಗಿ ಸಚಿವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

300x250 AD

ಈ ಸಂದರ್ಭದಲ್ಲಿ ಪ್ರಮುಖರಾದ ಬಾಲಕೃಷ್ಣ ನಾಯಕ, ಪ.ಪಂ ಸದಸ್ಯರಾದ ಅಮಿತ್ ಅಂಗಡಿ, ಸತೀಶ ನಾಯ್ಕ ಹಾಗೂ ಸ್ಥಳೀಯ ಪ್ರಮುಖರು, ಅಧಿಕಾರಿಗಳು ಇದ್ದರು.

Share This
300x250 AD
300x250 AD
300x250 AD
Back to top