• Slide
    Slide
    Slide
    previous arrow
    next arrow
  • ಪಾಲಿಟೆಕ್ನಿಕ್ ಕಾಲೇಜಿನ ನೂತನ ಗ್ರಂಥಾಲಯ ಕಟ್ಟಡ ಉದ್ಘಾಟನೆ

    300x250 AD

    ಸಿದ್ದಾಪುರ: ಪಟ್ಟಣದ ಪಾಲಿಟೆಕ್ನಿಕ್ ಕಾಲೇಜಿಗೆ ರೂ.2 ಕೋಟಿ ಅನುದಾನದ ನೂತನ ಗ್ರಂಥಾಲಯ ಕಟ್ಟಡ ಹಾಗೂ ಲ್ಯಾಬ್ ನಿರ್ಮಾಣ ಕಾಮಗಾರಿಯ ಭೂಮಿ ಪೂಜೆಯನ್ನು ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ನೆರವೇರಿಸಿದರು. ಇದೇ ವೇಳೆ ಕಾಲೇಜಿನ ಆವರಣದಲ್ಲಿ ನಿರ್ಮಾಣ ಮಾಡಿದ ಸರ್.ಎಂ.ವಿಶ್ವೇಶ್ವರಯ್ಯರವರ ಮೂರ್ತಿ ಅನಾವರಣ ಮಾಡಿ, ಭುವನಸಿರಿ ಸ್ಮರಣ ಸಂಚಿಕೆಯನ್ನು ಬಿಡುಗಡೆ ಹಾಗೂ ಕಾಲೇಜಿನ ಹಳೆ ವಿದ್ಯಾರ್ಥಿ ಸಂಘದ ಉದ್ಘಾಟನೆ ಮಾಡಿದರು.

    ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ ಉಪಾಧ್ಯಕ್ಷ ವಿನಾಯಕ ಕೆ.ಆರ್., ಸದಸ್ಯರಾದ ಗಣಪತಿ ಗೊಂಡ, ಮಾಬ್ಲೇಶ್ವರ ನಾಯ್ಕ, ಪಟ್ಟಣ ಪಂಚಾಯತ ಸದಸ್ಯರಾದ ಮಾರುತಿ ನಾಯ್ಕ, ಗುರುರಾಜ ಶಾನಭಾಗ, ಮಂಜುನಾಥ ಭಟ್ಟ, ಸುರೇಶ ನಾಯ್ಕ, ರಾಜೇಂದ್ರ ಕಿಂದ್ರಿ, ಕಾಲೇಜಿನ ಪ್ರಾಂಶುಪಾಲರಾದ ಶಾಂತಾರಾಮ ಸಿಪಿಐ ಕುಮಾರ, ಕಾಲೇಜಿನ ಹಳೆವಿದ್ಯಾರ್ಥಿ ಸಂಘದ ಅಧ್ಯಕ್ಷ ಹರ್ಷಾ ನಾಯ್ಕ ಹಾಗೂ ಪದಾಧಿಕಾರಿಗಳು, ಉಪನ್ಯಾಸಕರು, ನಾಗರೀಕರು ಇದ್ದರು.

    300x250 AD
    Share This
    300x250 AD
    300x250 AD
    300x250 AD
    Leaderboard Ad
    Back to top