Slide
Slide
Slide
previous arrow
next arrow

ಕ್ರೀಡಾಕೂಟ: ಆನಂದಾಶ್ರಮ ಪ್ರೌಢಶಾಲೆ ರಾಜ್ಯ ಮಟ್ಟಕ್ಕೆ

300x250 AD

ಭಟ್ಕಳ: ಇಲ್ಲಿನ ಆನಂದಾಶ್ರಮ ಪ್ರೌಢಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಉತ್ತಮ ಸಾಧನೆ ತೋರಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ವಿದ್ಯಾರ್ಥಿಗಳಾದ ವಿಪುಲ್ ಪಡಿಯಾರ 200 ಮೀಟರ್ ಓಟದಲ್ಲಿ ಪ್ರಥಮ, ಶ್ರೇಯಾ ನಾಯ್ಕ, ಜಾವಲಿನ್ ಥ್ರೋ ಹಾಗೂ ಟ್ರಿಪಲ್ ಜಂಪ್‌ನಲ್ಲಿ ಪ್ರಥಮ, ವಿಜೇತ ಗೌಡ ಶಟಲ್ ಬ್ಯಾಡ್ಮಿಂಟನ್‌ನಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಸೈಯದ್ ಮುಖೀದ್, ಮಹಮ್ಮದ್ ಅಫ್ಜಲ್ ಕರಾಟೆಯಲ್ಲಿ ಹಾಗೂ ಅಹಮ್ಮದ್ ಕಟ್ಟಲ್ ಥ್ರೋ ಬಾಲ್‌ನಲ್ಲಿ ಉತ್ತಮ ಸಾಧನೆ ತೋರಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿಗಳ ಸಾಧನೆಗೆ ಶಾಲಾ ಆಡಳಿತ ಮಂಡಳಿ, ಶಿಕ್ಷಕ ವೃಂದ, ಪಾಲಕರು ಸಂತಸ ವ್ಯಕ್ತಪಡಿಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top