• Slide
    Slide
    Slide
    previous arrow
    next arrow
  • ಮುರುಘಾಶ್ರೀ ವಿರುದ್ಧ ಮತ್ತೊಂದು ಕೇಸ್ ದಾಖಲು

    300x250 AD

    ಚಿತ್ರದುರ್ಗ: ಪೋಕ್ಸೋ ಪ್ರಕರಣದಲ್ಲಿ ಬಂಧಿತರಾಗಿರುವ ಮುರುಘಾಶ್ರೀಗಳ ವಿರುದ್ಧ ಮತ್ತೊಂದು ಪ್ರಕರಣ ದಾಖಲಾಗಿದ್ದು, ಬಾಲ ನ್ಯಾಯ ಕಾಯ್ದೆ ಉಲ್ಲಂಘನೆ ಪ್ರಕರಣ ದಾಖಲಾಗಿದೆ.
    ಪೋಕ್ಸೋ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಆರೋಪಿ ಮುರುಘಾಶ್ರೀ, ಮಠದ ಕಾರ್ಯದರ್ಶಿ ಪರಮಶಿವಯ್ಯ, ಮಠದ ವಸತಿ ಶಾಲೆಯ ಲೇಡಿ ವಾರ್ಡನ್ ರಶ್ಮಿ ಹಾಗೂ ಮಡಿಲು ದತ್ತು ಕೇಂದ್ರದ ಮುಖ್ಯಸ್ಥೆ ವೀಣಾ ವಿರುದ್ಧ ಪ್ರಕರಣ ದಾಖಲಾಗಿದೆ.
    ಪೋಕ್ಸೋ ಪ್ರಕರಣ ದಾಖಲಾಗಿರುವ ಹಿನ್ನೆಲೆಯಲ್ಲಿ ಮಠಕ್ಕೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದ ವೇಳೆ ಮಠದ ಹಾಸ್ಟೆಲ್‌ನಲ್ಲಿ ಇಬ್ಬರು ಬಾಲಕಿಯರು ಪತ್ತೆಯಾಗಿದ್ದಾರೆ. ಸಿಡಬ್ಲ್ಯೂಸಿ ಗಮನಕ್ಕೆ ತರದೇ ಇಬ್ಬರು ಮಕ್ಕಳ ಪಾಲನೆ ಮಾಡುತ್ತಿರುವ ಆರೋಪ ಹಿನ್ನೆಲೆಯಲ್ಲಿ ಸಿಡ್ಬ್ಲ್ಯೂಸಿ ಅಧಿಕಾರಿಗಳು ಚಿತ್ರದುರ್ಗ ಠಾಣೆಯಲ್ಲಿ ಮುರುಘಾಶ್ರೀ ಸೇರಿ ನಾಲ್ವರ ವಿರುದ್ಧ ಬಾಲನ್ಯಾಯ ಕಾಯ್ದೆ ಉಲ್ಲಂಘನೆ ಕೇಸ್ ದಾಖಲಿಸಿದ್ದಾರೆ.

    300x250 AD

    Share This
    300x250 AD
    300x250 AD
    300x250 AD
    Leaderboard Ad
    Back to top