Slide
Slide
Slide
previous arrow
next arrow

ಸರಕಾರಿ ಶಾಲೆಗಳ ನಿರ್ವಹಣೆಗಾಗಿ ದೇಣಿಗೆ ಸಂಗ್ರಹ: ರೈತ ಸಂಘ ಖಂಡನೆ

300x250 AD

ಅಂಕೋಲಾ: ಸರಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ನಿರ್ವಹಣೆಗಳಿಗಾಗಿ ವಿದ್ಯಾರ್ಥಿಗಳ ಪೋಷಕರಿಂದ ಮಾಸಿಕ ಕನಿಷ್ಠ 100 ರೂ. ಕೊಡುಗೆಯನ್ನು ಪಡೆಯುವ ಮತ್ತು ಆ ಮೂಲಕ ಬಡವರ ಹಾಗೂ ಮಹಿಳಾ ಶಿಕ್ಷಣಕ್ಕೆ ಕುತ್ತು ತರಲಿರುವ, ಸರಕಾರಿ ಸುತ್ತೋಲೆಯನ್ನು ಈ ಕೂಡಲೇ ಹಿಂಪಡೆಯಲು ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಸಮಿತಿ ಬಲವಾಗಿ ಒತ್ತಾಯಿಸುತ್ತದೆ ಎಂದು ಜಿಲ್ಲಾ ಸಮಿತಿ ಅಧ್ಯಕ್ಷ ಶಾಂತಾರಾಮ ನಾಯಕ ತಿಳಿಸಿದ್ದಾರೆ.

ಕರ್ನಾಟಕ ಸರಕಾರ ದಿನಾಂಕ: 19.10.2022ರಂದು ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರ ಕಛೇರಿ ಮೂಲಕ ಹೊರಡಿಸಲಾದ ಸುತ್ತೋಲೆಯು (ಸಂಖ್ಯೆ: ಸಿ(7) ಸ.ಶಾಲಾ.ದೇಣಿಗೆ.01/2022-23). ಇದು ಸಾರ್ವಜನಿಕ ಶಿಕ್ಷಣವನ್ನು ದುರ್ಬಲಗೊಳಿಸುವ ಹಾಗೂ ಆ ಮೂಲಕ ಬಡವರು, ದಲಿತರು ಹಾಗೂ ಮಹಿಳಾ ಶಿಕ್ಷಣವನ್ನು ನಿರಾಕರಿಸುವ ಮತ್ತು ಸಾರ್ವಜನಿಕ ಶಿಕ್ಷಣವನ್ನು ಕಳಚಿಹಾಕಿ ಖಾಸಗೀ ಶಿಕ್ಷಣವನ್ನು ಬಲಗೊಳಿಸುವ, ದುರುದ್ದೇಶದಿಂದ ಹೊರಡಿಸಿದ ಸುತ್ತೋಲೆಯಾಗಿದೆ. ತಕ್ಷಣವೇ ಸದರಿ ಸುತ್ತೋಲೆಯನ್ನು ವಾಪಸು ಪಡೆಯಬೇಕೆಂದು ಒತ್ತಾಯಿಸಿದೆ.

300x250 AD
Share This
300x250 AD
300x250 AD
300x250 AD
Back to top