• Slide
    Slide
    Slide
    previous arrow
    next arrow
  • ಕುತ್ತಿಗೆ ಕೊಯ್ದುಕೊಂಡು ಆತ್ಮಹತ್ಯೆಗೆ ಶರಣಾದ ವಿವಾಹಿತ

    300x250 AD

    ದಾಂಡೇಲಿ: ವಿವಾಹಿತ ವ್ಯಕ್ತಿಯೋರ್ವ ಕುತ್ತಿಗೆ ಕೊಯ್ದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ನಗರದ ಹಳೆದಾಂಡೇಲಿಯ ಮದರಸಾ ಚಾಳದಲ್ಲಿ ಸೋಮವಾರ ನಡೆದಿದೆ.
    37 ವರ್ಷ ವಯಸ್ಸಿನ ಪ್ರಾನ್ಸಿಸ್ ಪುಲ್ಲಯ್ಯ ಡಮ್ಮು ಎಂಬಾತನೆ ಆತ್ಮಹತ್ಯೆಗೆ ಶರಣಾದ ವ್ಯಕ್ತಿಯಾಗಿದ್ದಾನೆ. ನಗರದ ವೆಸ್ಟ್ ಕೋಸ್ಟ್ ಕಾಗದ ಕಾರ್ಖಾನೆಯ ಲೋಡಿಂಗ್ ವಿಭಾಗದಲ್ಲಿ ಕಾರ್ಮಿಕನಾಗಿದ್ದ ಈತ ಹಳೆದಾಂಡೇಲಿಯ ಮದರಸಾ ಚಾಳದಲ್ಲಿರುವ ಬಾಡಿಗೆ ಮನೆಯೊಂದರಲ್ಲಿ ಏಕಾಂಗಿಯಾಗಿ ವಾಸವಾಗಿದ್ದನು. ಮನೆಯಲ್ಲಿ ಯಾರು ಇಲ್ಲದಿದ್ದ ಸಮಯದಲ್ಲಿ ಬ್ಲೇಡಿನಿಂದ ಕುತ್ತಿಗೆ ಕೊಯ್ದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.
    ಮನೆಗೆ ತಾಯಿ ಬಂದು ನೋಡಿದಾಗ ಮಗ ಪ್ರಾನ್ಸಿಸ್ ಸಾವನ್ನಪ್ಪಿರುವುದು ಬೆಳಕಿಗೆ ಬಂದಿದೆ. ರಕ್ತದ ಮಡುವಿನಲ್ಲಿದ್ದ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ನಗರದ ಸಾರ್ವಜನಿಕ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಮುಂದಿನ ಕ್ರಮ ಕೈಗೊಂಡಿದ್ದಾರೆ. ಮಾಹಿತಿಯ ಪ್ರಕಾರ ಕುಡಿತದ ಚಟವನ್ನು ಹೊಂದಿದ್ದನೆಂದು ತಿಳಿದು ಬಂದಿದ್ದು, ಕಳೆದ ಒಂದು ವರ್ಷದಿಂದ ಕೌಟುಂಬಿಕ ಕಲಹದಿಂದ ಮೃತನ ಹೆಂಡತಿ ತನ್ನ ಮೂವರು ಮಕ್ಕಳೊಂದಿಗೆ ಆಕೆಯ ತಾಯಿ ಮನೆಯಲ್ಲಿ ವಾಸವಾಗಿದ್ದಾಳೆಂದು ತಿಳಿದು ಬಂದಿದೆ.

    300x250 AD
    Share This
    300x250 AD
    300x250 AD
    300x250 AD
    Leaderboard Ad
    Back to top