Slide
Slide
Slide
previous arrow
next arrow

ರೆಸ್ಟೋರೆಂಟ್ ಮ್ಯಾನೇಜರ್ ಮೇಲೆ ಮಾರಣಾಂತಿಕ ಹಲ್ಲೆ

300x250 AD

ಕುಮಟಾ: ಪಟ್ಟಣದ ಹಳೇ ಬಸ್ ನಿಲ್ದಾಣ ಸಮೀಪದ ದ್ವಾರಕಾ ಬಾರ್ ಆ್ಯಂಡ್ ರೆಸ್ಟೋರೆಂಟ್‌ನಲ್ಲಿ ಕೆಲ ಯುವಕರ ತಂಡ ರೆಸ್ಟೋರೆಂಟ್ ಮ್ಯಾನೇಜರ್ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಬಗ್ಗೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪಟ್ಟಣದ ದ್ವಾರಕಾ ಬಾರ್ ಆ್ಯಂಡ್ ರೆಸ್ಟೊರೆಂಟ್‌ನಲ್ಲಿ ನಡೆದ ಗಲಾಟೆಯಲ್ಲಿ ಮ್ಯಾನೇಜರ್ ಹರೀಶ ಶೆಟ್ಟಿ ಗಂಭೀರ ಗಾಯಗೊಂಡವರು. ದ್ವಾರಕಾ ಬಾರ್ ಆ್ಯಂಡ್ ರೆಸ್ಟೊರೆಂಟ್‌ನ ಗಾರ್ಡನ್ ವಿಭಾಗದಲ್ಲಿ ಉಪ್ಪಿನಗಣಪತಿ ಏರಿಯಾದ ಜಟ್ಟಪ್ಪ ಲಕ್ಷ್ಮಣ ಗೌಡ ಮತ್ತು ಗಜು ಸೇರಿದಂತೆ ಕೆಲ ಯುವಕರ ತಂಡ ಇನ್ನೊಂದು ಯುವಕರ ತಂಡದೊಂದಿಗೆ ಗಲಾಟೆ ಮಾಡುತ್ತಿದ್ದು, ಸೋಡಾ ಬಾಟಲಿ ಒಡೆಯುತ್ತಿರುವುದು ಕಂಡುಬಂದಿದೆ. ತಕ್ಷಣ ಸ್ಥಳಕ್ಕೆ ತೆರಳಿ, ಪ್ರಶ್ನಿಸಿದ ಮ್ಯಾನೇಜರ್ ಮೇಲೆ ಹಲ್ಲೆಗೆ ಮುಂದಾದ ಯುವಕರು, ಮ್ಯಾನೇಜರ್‌ಗೆ ಹಿಗ್ಗಾಮುಗ್ಗಾ ಥಳಿಸಿದ್ದಾರೆ.
ಅಲ್ಲದೇ ಸೋಡಾ ಬಾಡಲಿಯಿಂದ ಮ್ಯಾನೇಜರ್ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಗಂಭೀರ ಗಾಯಗೊಂಡ ಮ್ಯಾನೇಜರ್‌ನನ್ನು ತಾಲೂಕು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗಿದೆ. ಹಲ್ಲೆ ಮಾಡಿದ ಉಪ್ಪಿನಗಣಪತಿ ಏರಿಯಾದ ಯುವಕರ ವಿರುದ್ಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಕೈಗೊಳ್ಳಲಾಗಿದೆ.

300x250 AD
Share This
300x250 AD
300x250 AD
300x250 AD
Back to top