Slide
Slide
Slide
previous arrow
next arrow

ಕೆ.ಎಸ್.ಹೆಗಡೆ ಆಸ್ಪತ್ರೆಯಿಂದ ಉಚಿತ ಆರೋಗ್ಯ ತಪಾಸಣೆ ಶಿಬಿರ

300x250 AD

ಅಂಕೋಲಾ: ಗೋಕರ್ಣ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಅ.29 ಬೆಳಿಗ್ಗೆ 10ರಿಂದ ಮಧ್ಯಾಹ್ನ 2ರವರೆಗೆ, ಅಚವೆ ಸರಕಾರಿ ಪ್ರೌಢಶಾಲೆಯಲ್ಲಿ ಅ.30ರ ಬೆಳಿಗ್ಗೆ 9ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಮಂಗಳೂರು ಕೆ.ಎಸ್.ಹೆಗಡೆ ಆಸ್ಪತ್ರೆಯಿಂದ ಉಚಿತ ಆರೋಗ್ಯ ತಪಾಸಣೆ ಶಿಬಿರ ಹಮ್ಮಿಕೊಳ್ಳಲಾಗಿದೆ.
ಶಿಬಿರದಲ್ಲಿ ಆಸ್ಪತ್ರೆಯ ನುರಿತ ವೈದ್ಯರು ಎಲ್ಲಾ ರೀತಿಯ ಕಾಯಿಲೆಗಳ ಬಗ್ಗೆ ಚಿಕಿತ್ಸೆ, ಸಲಹೆ ನೀಡಲಿದ್ದಾರೆ. ಈ ಶಿಬಿರದಲ್ಲಿ ಉಚಿತವಾಗಿ ಮಧುಮೇಹ ತಪಾಸಣೆ, ರಕ್ತದ ಒತ್ತಡ, ಇಸಿಜಿ ಹಾಗೂ ಅಗತ್ಯ ಔಷಧಗಳನ್ನು ಉಚಿತವಾಗಿ ನೀಡುವರು. ಈ ಕಾರ್ಯಕ್ರಮದ ಪ್ರಯೋಜನ ಪಡೆಯಲು ಸಂಗಮ ಸೇವಾ ಸಂಸ್ಥೆ ಅಧ್ಯಕ್ಷ ರವೀಂದ್ರ ಶೆಟ್ಟಿ, ಜಾಗತಿ ಸಂಘದ ಕುಂಟಗಣಿಯ ಬಾಲಚಂದ್ರ ಶೆಟ್ಟಿ ಹಾಗೂ ರಾಜೇಶ ನಾಯಕ, ಕೆ.ಎಸ್.ಹೆಗಡೆ ಆಸ್ಪತ್ರೆಯ ರಾಜೇಶ ಮಳವಳ್ಳಿ, ಕದಂಬ ಫೌಂಡೇಶನ್ ಶಿರಸಿಯ ಸುರೇಶ ಶೆಟ್ಟಿ ಹಾಗೂ ಅಚವೆ ಗ್ರಾಮ ಪಂಚಾಯತಿ ಅಧ್ಯಕ್ಷ, ಉಪಾಧ್ಯಕ್ಷರು ಕೋರಿದ್ದಾರೆ.

300x250 AD
Share This
300x250 AD
300x250 AD
300x250 AD
Back to top