Slide
Slide
Slide
previous arrow
next arrow

ಗಂಧದಗುಡಿ ಪ್ರದರ್ಶನಕ್ಕೆ ಒತ್ತಾಯಿಸಿ ಥಿಯೇಟರ್ ಎದುರು ಪ್ರತಿಭಟನೆ

300x250 AD

ಶಿರಸಿ: ಅಪ್ಪು ನಟನೆಯ ಗಂಧದಗುಡಿ ಸಿನಿಮಾವನ್ನ ನಾಳೆ ಚಿತ್ರಮಂದಿರದಲ್ಲಿ ಪ್ರದರ್ಶನ ಮಾಡುವಂತೆ ಒತ್ತಾಯಿಸಿ ಅಪ್ಪು ಅಭಿಮಾನಿಗಳು ಪ್ರತಿಭಟನೆ ನಡೆಸಿರುವ ಘಟನೆ ನಗರದಲ್ಲಿ ನಡೆದಿದೆ.
ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ಕೊನೆಯ ಸಿನಿಮಾ (ಡಾಕ್ಯುಮೆಂಟರಿ) ಗಂಧದಗುಡಿ ಶಿರಸಿ ನಗರದ ನಟರಾಜ ಚಿತ್ರಮಂದಿರದಲ್ಲಿ ಪ್ರದರ್ಶನ ಆಗಲೇ ಬೇಕು ಎಂದು ನೂರಾರು ಅಪ್ಪು ಅಭಿಮಾನಿಗಳು ಥಿಯೇಟರ್ ಗೆ ಮುತ್ತಿಗೆ ಹಾಕಿ, ಚಿತ್ರಮಂದಿರದ ಸಿಬ್ಬಂದಿಗಳಿಗೆ ಒತ್ತಾಯ ಮಾಡಿದ್ದಾರೆ. ಕೆಲ ಹೊತ್ತು ನಡೆದ ಮಾತಿನ ಚಕಮಕಿಯಲ್ಲಿ ಕೊನೆಗೂ ಅಭಿಮಾನಿಗಳ ಒತ್ತಾಯಕ್ಕೆ ಮಣಿದ ಮಾಲೀಕರು ಚಿತ್ರ ಪ್ರದರ್ಶನ ಮಾಡಲು ಒಪ್ಪಿಗೆ ನೀಡಿದ್ದಾರೆ.

300x250 AD
Share This
300x250 AD
300x250 AD
300x250 AD
Back to top