• Slide
    Slide
    Slide
    previous arrow
    next arrow
  • ಕಾಶ್ಮೀರದಲ್ಲಿ ನಿಲ್ಲದ ಉಗ್ರರ ಉಪಟಳ : ಓರ್ವ ಉಗ್ರನ ಹತ್ಯೆ

    300x250 AD

    ಶ್ರೀನಗರ (ಜಮ್ಮು ಮತ್ತು ಕಾಶ್ಮೀರ): ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭೇಟಿಯ ನಡುವೆ ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರು ಉಪಟಳ ಮುಂದುವರೆಸಿದ್ದಾರೆ. ಕುಲ್ಗಾಮ್ ಜಿಲ್ಲೆಯಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಭದ್ರತಾ ಸಿಬ್ಬಂದಿ ಓರ್ವ ಭಯೋತ್ಪಾದಕನನ್ನು ಹೊಡೆದುರುಳಿಸಿದ್ದಾರೆ.
    ಇಲ್ಲಿನ ಕೌಸರ್‌ನಾಗ್ ಪ್ರದೇಶದ ಆಸ್ಥಾನ್ ಮಾರ್ಗ್ನಲ್ಲಿ ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ಗುಂಡಿನ ಚಕಮಕಿ ನಡೆದಿದೆ. ಅವಿತು ಕುಳಿತ ಉಳಿದ ಉಗ್ರರಿಗೆ ಶೋಧ ಕಾರ್ಯ ಪ್ರಗತಿಯಲ್ಲಿದೆ ಎಂದು ವರದಿಯಾಗಿದೆ.
    ಮತ್ತೊಂದೆಡೆ, ಬಂಡಿಪೋರ್ ಜಿಲ್ಲೆಯಲ್ಲಿ ಕಡಿಮೆ ತೀವ್ರತೆಯ ಸ್ಫೋಟ ಸಂಭವಿಸಿದೆ. ಅಲೂಸಾ ಪ್ರದೇಶದಲ್ಲಿ ಸೇನಾ ವಾಹನ ಸಂಚರಿಸಿದ ಕೆಲ ನಿಮಿಷಗಳಲ್ಲೇ ಘಟನೆ ನಡೆದಿದೆ. ಇದರಲ್ಲಿ ಯಾವುದೇ ಪ್ರಾಣಹಾನಿ ಹಾಗೂ ಗಾಯಗಳಾಗಿಲ್ಲ. ಘಟನಾ ಸ್ಥಳಕ್ಕೆ ಭದ್ರತಾ ಪಡೆಗಳು ದೌಡಾಯಿಸಿದ್ದು, ಇಲ್ಲಿಯೂ ಕೂಡ ಶೋಧ ಕಾರ್ಯಾರಂಭಿಸಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

    300x250 AD
    Share This
    300x250 AD
    300x250 AD
    300x250 AD
    Leaderboard Ad
    Back to top