• Slide
    Slide
    Slide
    previous arrow
    next arrow
  • ಎಂಎಂ ಮಹಾವಿದ್ಯಾಲಯದಲ್ಲಿ ಕೋಟಿ ಕಂಠ ಗಾಯನ ಕಾರ್ಯಕ್ರಮ

    300x250 AD

    ಶಿರಸಿ: ನಗರದ ಎಂಇಎಸ್ ನ ಎಂಎಂ ಕಲಾ ಮತ್ತು ವಿಜ್ಞಾನ ಮಹಾವಿದ್ಯಾಲಯದಲ್ಲಿ ನನ್ನ ನಾಡು ನನ್ನ ಹಾಡು ಕೋಟಿ ಕಂಠ ಗಾಯನ ಕಾರ್ಯಕ್ರಮದ ಅಂಗವಾಗಿ ಕಾಲೇಜಿನ ಸಂಗೀತ ವಿಭಾಗ ವಿದ್ಯಾರ್ಥಿಗಳು, ಪ್ರಾಧ್ಯಾಪಕರು, ಅಂತೆಯೇ ಕಾಲೇಜಿನ ಎಲ್ಲಾ ವಿದ್ಯಾರ್ಥಿಗಳು ಜೊತೆಗೂಡಿ ಕನ್ನಡ ಹಾಡುಗಳನ್ನು ಹಾಡಿದರು.
    ಈ ಸಂದರ್ಭದಲ್ಲಿ ಮಾತನಾಡಿದ ಪ್ರಾಚಾರ್ಯ ಡಾ. ಟಿಎಸ್ ಹಳೆಮನೆ ಕನ್ನಡ ರಾಜ್ಯೋತ್ಸವದ ಸನಿಹದಲ್ಲಿ ನಾವಿದ್ದೇವೆ. ಕನ್ನಡ ನಾಡು ನುಡಿ ತೆರನಾಗಿ ಎಲ್ಲರೂ ಪ್ರೀತಿಯನ್ನು ಹೊಂದುವ ಸಂದರ್ಭ ಇದಾಗಿದೆ. ಅನೇಕ ಶತಮಾನಗಳ ಸುದೀರ್ಘ ಇತಿಹಾಸವನ್ನು ಹೊಂದಿ ಭಾಷಾ ಸಮೃದ್ಧಿಯ ಸೌಂದರ್ಯ ಭರಿತವಾದಂತ ಭಾಷೆ ಕನ್ನಡ. ಆ ಭಾಷೆಯನ್ನು ಮಾತನಾಡುವ ನಾವು ಕನ್ನಡಿಗರೇ ಧನ್ಯರು. ಇದರ ಉಳಿವು ಮತ್ತು ಅಭಿವೃದ್ಧಿಗಾಗಿ ಪ್ರತಿಯೊಬ್ಬರು ಶ್ರಮಿಸೋಣ. ಕನ್ನಡವನ್ನೇ ಮಾತನಾಡೋಣ ಎಂದರು. ಈ ಸಂದರ್ಭದಲ್ಲಿ ಕಾಲೇಜಿನ ಎಲ್ಲಾ ಪ್ರಾಧ್ಯಾಪಕರು, ಶಿಕ್ಷಕೇತರ ಸಿಬ್ಬಂದಿಗಳು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಸಂಗೀತ ವಿಭಾಗ ಮುಖ್ಯಸ್ಥ ಡಾ. ಕೆ.ಜಿ. ಭಟ್ ನೇತೃತ್ವದಲ್ಲಿ ಕನ್ನಡ ಹಾಡುಗಳನ್ನು ಹಾಡಲಾಯಿತು.

    300x250 AD
    Share This
    300x250 AD
    300x250 AD
    300x250 AD
    Leaderboard Ad
    Back to top