Slide
Slide
Slide
previous arrow
next arrow

ಕೆಂಪೇಗೌಡ ರಥಕ್ಕೆ ಪೂರ್ಣಕುಂಭ ಸ್ವಾಗತ ಕೋರಿದ ಮಹಿಳೆಯರು

300x250 AD

ಹಳಿಯಾಳ: ಮೃತ್ತಿಕಾ ಸಂಗ್ರಹ ಅಭಿಯಾನದ ಹಿನ್ನೆಲೆಯಲ್ಲಿ ಪಟ್ಟಣಕ್ಕೆ ಆಗಮಿಸಿದ ಕೆಂಪೇಗೌಡ ರಥವನ್ನು ಪೂರ್ಣಕುಂಭದೊಂದಿಗೆ ಬರಮಾಡಿಕೊಂಡು ಶ್ರೀ ತುಳಜಾ ಭವಾನಿ ದೇವಿಯ ಸನ್ನಿದಾನದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು. 

ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನ.11 ರಂದು ಉದ್ಘಾಟನೆಗೊಳ್ಳುವ ನಾಡಪ್ರಭು ಕೆಂಪೇಗೌಡ ಪ್ರತಿಮೆ ಹಾಗೂ ಕೆಂಪೇಗೌಡ ಥೀಮ್ ಪಾರ್ಕ್‌ಗೆ ರಾಜ್ಯದ ಎಲ್ಲ ಜಿಲ್ಲೆಗಳಿಂದ ಪವಿತ್ರ ಮೃತ್ತಿಕ ಸಂಗ್ರಹ ಅಭಿಯಾನ ಹಮ್ಮಿಕೊಂಡಿದ್ದು, ಈ ಪ್ರಯುಕ್ತ ಪವಿತ್ರ ಮೃತ್ತಿಕಾ ಸಂಗ್ರಹಕ್ಕೆ ಹಳಿಯಾಳ ಪಟ್ಟಣಕ್ಕೆ ಕೆಂಪೇಗೌಡ ರಥ ಆಗಮಿಸಿತು. ಈ ಕುರಿತು ಜನರಿಗೆ ಮನವರಿಕೆ ಮಾಡಲು ನಾಡಗೌಡ ಕೆಂಪೇಗೌಡರ ಇತಿಹಾಸದ ಕುರಿತು ವಿಡಿಯೋ ತೋರಿಸಲಾಯಿತು.

300x250 AD

 ಈ ಸಂದರ್ಭದಲ್ಲಿ ತಾಲೂಕು ಆಡಳಿತ ಅಧಿಕಾರಿಗಳು, ಪುರಸಭೆ ಮುಖ್ಯಾಧಿಕಾರಿಗಳು, ತಾಲೂಕ ಪಂಚಾಯತ್ ಅಧಿಕಾರಿಗಳು, ಸಂಘಟನೆ ಪದಾಧಿಕಾರಿಗಳು ಇದ್ದರು.

Share This
300x250 AD
300x250 AD
300x250 AD
Back to top