• Slide
    Slide
    Slide
    previous arrow
    next arrow
  • ರಾಷ್ಟ್ರೀಯ ಏಕತಾ ದಿವಸ್ ಪರೇಡ್‌ಗೆ ಮೋದಿ ಚಾಲನೆ

    300x250 AD

    ಕೆವಾಡಿಯಾ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಗುಜರಾತ್‌ನ ಕೆವಾಡಿಯಾದಲ್ಲಿರುವ ಏಕತಾ ಪ್ರತಿಮೆಯಲ್ಲಿ ರಾಷ್ಟ್ರೀಯ ಏಕತಾ ದಿವಸ್ ಪರೇಡ್‌ಗೆ ಚಾಲನೆ ನೀಡಿದರು. ಪ್ರಧಾನಮಂತ್ರಿಯವರು ಸರ್ದಾರ್ ಪಟೇಲ್ ಅವರ ಜನ್ಮದಿನದಂದು ಅವರಿಗೆ ಪುಷ್ಪ ನಮನ ಸಲ್ಲಿಸಿದರು.

    ಈ ಸಂದರ್ಭವನ್ನು  ಮಾತನಾಡಿದ ಅವರು, ರಾಷ್ಟ್ರೀಯ ಏಕತಾ ದಿವಸ್ ನಮ್ಮ ರಾಷ್ಟ್ರವನ್ನು ಒಗ್ಗೂಡಿಸುವಲ್ಲಿ ಸರ್ದಾರ್ ಪಟೇಲ್ ಅವರ ಅಮೂಲ್ಯ ಪಾತ್ರಕ್ಕೆ ಗೌರವವಾಗಿದೆ. ಏಕತೆ ಯಾವಾಗಲೂ ಭಾರತದ ವಿಶಿಷ್ಟತೆಯಾಗಿದೆ ಆದರೆ ಇಂದಿಗೂ ದೇಶವನ್ನು ಒಡೆಯುವ ಮತ್ತು ವಿಭಜಿಸುವ ಪ್ರಯತ್ನಗಳು ನಡೆಯುತ್ತಿವೆ ಎಂದು ಹೇಳಿದರು.

    ದೇಶವನ್ನು ಧರ್ಮ, ಜಾತಿ ಮತ್ತು ಭಾಷೆಯಲ್ಲಿ ವಿಭಜಿಸುವ ಋಣಾತ್ಮಕ ನಿರೂಪಣೆಗಳಿಂದ ದೂರವಿರಬೇಕು ಎಂದು ಅವರು ಜನರನ್ನು ಒತ್ತಾಯಿಸಿದರು.

    ಕೇಂದ್ರ ಸರ್ಕಾರದ ಎಲ್ಲಾ ನೀತಿಗಳು ಸರ್ದಾರ್ ಪಟೇಲ್ ಅವರ ಕಲ್ಪನೆಯಂತೆ ಎಲ್ಲಾ ನಾಗರಿಕರಿಗೆ ಸಮಾನ ಅವಕಾಶಗಳನ್ನು ನೀಡುವ ಮೂಲಕ ಕೊನೆಯ ಮೈಲಿನ ಜನರನ್ನು ಅಭಿವೃದ್ಧಿಯ ಮುಖ್ಯವಾಹಿನಿಗೆ ತರುವ ಗುರಿಯನ್ನು ಹೊಂದಿವೆ ಎಂದು ಪ್ರಧಾನಿ ಹೇಳಿದರು.

    300x250 AD

    ಅವರು ನಿನ್ನೆ ಮೊರ್ಬಿಯಲ್ಲಿ ಸೇತುವೆ ಕುಸಿತ ದುರಂತದಲ್ಲಿ ಜೀವಹಾನಿಗೆ ಸಂತಾಪ ಸೂಚಿಸಿದರು. ರಾಜ್ಯ ಸರ್ಕಾರಕ್ಕೆ ಕೇಂದ್ರವು ಎಲ್ಲ ರೀತಿಯ ನೆರವು ನೀಡುತ್ತಿದೆ. ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಯಲ್ಲಿ ಯಾವುದೇ ಲೋಪವಾಗುವುದಿಲ್ಲ ಎಂದು ಭರವಸೆ ನೀಡಿದರು.

    ಏಕತಾ ದಿವಸ್ ಪರೇಡ್ ಬಿಎಸ್‌ಎಫ್ ಮತ್ತು ಐದು ರಾಜ್ಯ ಪೊಲೀಸ್ ಪಡೆಗಳ ತುಕಡಿಗಳ ಭಾಗವಹಿಸುವಿಕೆಗೆ ಸಾಕ್ಷಿಯಾಯಿತು.  2022 ರ ಕಾಮನ್‌ವೆಲ್ತ್ ಕ್ರೀಡಾಕೂಟದ ಆರು ಪೊಲೀಸ್ ಕ್ರೀಡಾ ಪದಕ ವಿಜೇತರು ಸಹ ಪರೇಡ್‌ನಲ್ಲಿ ಭಾಗವಹಿಸಿದ್ದರು. ಮೋರ್ಬಿ ಸೇತುವೆ ಕುಸಿತ ದುರಂತದ ಹಿನ್ನೆಲೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ರದ್ದುಗೊಳಿಸಲಾಗಿತ್ತು.

    ಕೃಪೆ:-http://news13.in

    Share This
    300x250 AD
    300x250 AD
    300x250 AD
    Leaderboard Ad
    Back to top