Slide
Slide
Slide
previous arrow
next arrow

ಕ್ರೀಡೆ ವ್ಯಕ್ತಿಯ ವ್ಯಕ್ತಿತ್ವ ವಿಕಸನಕ್ಕೆ ರಹದಾರಿ: ಗೋಪಾಲಕೃಷ್ಣನಾಯಕ

300x250 AD

ಕಾರವಾರ: ಕ್ರೀಡೆ ವ್ಯಕ್ತಿಯ ವ್ಯಕ್ತಿತ್ವ ವಿಕಸನಕ್ಕೆ ರಹದಾರಿ. ಪ್ರತಿಯೊಬ್ಬರೂ ಕ್ರೀಡೆಯಲ್ಲಿ ಪಾಲ್ಗೊಂಡು ಕ್ರೀಡಾ ಪ್ರೇಮ ಮೆರೆಯಬೇಕೆಂದು ಕೆ.ಪಿ.ಸಿ.ಸಿ ಮಾಜಿ ಕಾರ್ಯದರ್ಶಿ ಗೋಪಾಲಕೃಷ್ಣನಾಯಕ ಹೇಳಿದರು.

ಪಿ. ಎಂ. ಹೈಸ್ಕೂಲ್‌ನ ಸಭಾಂಗಣದಲ್ಲಿ ನಡೆದ ತಾಲೂಕಾಮಟ್ಟದ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ಕ್ರೀಡಾಂಗಣವನ್ನು ಉದ್ಘಾಟಿಸಿ ಮಾತನಾಡಿದರು.

ಕಾರ್ಯಕ್ರಮವನ್ನು ಉದ್ಘಾಟಿಸಿದ ಕೆ.ಪಿ.ಸಿ. ಎಲ್. ನ ನಿವೃತ್ತ ಅಕೌಂಟ್ ಆಫೀಸರ್ ಗೋಪಾಲಕೃಷ್ಣ ಎನ್. ನಾಯಕ ಮಾತನಾಡಿ, ಬ್ಯಾಡ್ಮಿಂಟನ್ ದೈಹಿಕ ಮತ್ತು ಮಾನಸಿಕ ವಿಕಾಸಕ್ಕೆ ದಾರಿ ಎಂದರು. ಕಾರ್ಯಕ್ರಮದ ಅಧ್ಯಕ್ಷತೆವಹಿಸಿದ ತಾ.ಪಂ. ಮಾಜಿ ಅಧ್ಯಕ್ಷೆ ಸುಜಾತಾ ಗಾಂವಕರ, ಉಡುಪಿಯ ಪೊಲೀಸ್ ಸಬ್‌ಇನ್ಸ್‌ಪೆಕ್ಟರ್ ಆದರ್ಶ ಡಿ.ನಾಯಕ, ಉದ್ಯಮಿದಾರ ಉದಯ ಜಿ. ನಾಯಕ ಭಾವಿಕೇರಿ ವೇದಿಕೆಯಲ್ಲಿದ್ದು ಮಾತನಾಡಿದರು. ಅಮೋಘ, ಸಾಗರ, ಆದರ್ಶ, ಅಭಿ, ಸಚಿನ್, ವೈಷ್ಣವ, ಭಾರ್ಗವ ಸೇರಿದಂತೆ ಕ್ರೀಡಾಭಿಮಾನಿಗಳು, ಕ್ರೀಡಾಪಟುಗಳು ಉಪಸ್ಥಿತರಿದ್ದರು.

300x250 AD

Share This
300x250 AD
300x250 AD
300x250 AD
Back to top