Slide
Slide
Slide
previous arrow
next arrow

ಕಾಳಿ ನದಿಯಲ್ಲಿ ಈಜಲು ತೆರಳಿದ್ದ ವ್ಯಕ್ತಿ ಮೊಸಳೆಗಳ ದಾಳಿಗೆ ಬಲಿ .!

300x250 AD

ದಾಂಡೇಲಿ : ಕಾಳಿ ನದಿಯಲ್ಲಿ ಈಜಲು ಹೋದ ವ್ಯಕ್ತಿಯೊಬ್ಬರನ್ನು ಮೊಸಳೆಗಳು ಎಳೆದೊಯ್ದ ಘಟನೆ ದಾಂಡೇಲಿಯ ಕುಳಗಿ ರಸ್ತೆಯ ಈಶ್ವರ ದೇವಸ್ಥಾನದ ಬಳಿ ಗುರುವಾರ ಬೆಳಗ್ಗೆ ನಡೆದಿದೆ.

ಬೆಳಗ್ಗೆ ಕಾಳಿ ನದಿಯಲ್ಲಿ ಈಜಲು ತೆರಳಿದ್ದ ಗುಜರಾತ್ ಮೂಲದ ದಾಂಡೇಲಿ ನಿವಾಸಿ ಪೀತಾಂಬರಿ ದಾಸ್ ಎಂಬುವವರನ್ನು ಮೊಸಳೆ ಹಿಡಿದಿದ್ದು,
ಪೀತಾಂಬರಿ ದಾಸ್ ಅವರು ದಂಡೆಯ ಮೇಲೆ ಚಪ್ಪಲಿ, ಬಟ್ಟೆಯನ್ನು ಇಟ್ಟು ನದಿಯಲ್ಲಿ ಇಳಿದಿದ್ದಾರೆ. ಈ ವೇಳೆ ಎರಡು ಮೊಸಳೆಗಳು ಈತನ ಮೇಲೆ ದಾಳಿ ನಡೆಸಿ ಹೊತ್ತೊಯ್ದಿದೆ. ಇದನ್ನು ಸ್ಥಳೀಯ ಜನರು ನೋಡಿ ಪೊಲೀಸರು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿಗೆ ಮಾಹಿತಿ ನೀಡಿದ್ದು ವ್ಯಕ್ತಿಯ ಶವಕ್ಕಾಗಿ ಹುಡುಕಾಟ ನಡೆದಿದೆ. ಪೀತಾಂಬರಿ ದಾಸ್ ಅವರು ವ್ಯಾಪಾರಿಯಾಗಿದ್ದು, ಕುಟುಂಬದೊಂದಿಗೆ ಇಲ್ಲಿಗೆ ಬಂದು ವಾಸವಿದ್ದರು.

300x250 AD

ದೇವಸ್ಥಾನವು ಕಾಳಿ ನದಿಯ ಸೇತುವೆಯ ಪಕ್ಕದಲ್ಲೇ ಇರುವ ಪ್ರದೇಶವಾಗಿದ್ದು, ಸೇತುವೆಯಲ್ಲಿ ನಿಂತಿದ್ದವರೊಬ್ಬರು ಪೀತಾಂಬರಿ ದಾಸ್ ಅವರು ಈಜುತ್ತಿರುವುದನ್ನು ಮತ್ತು ಮೊಸಳೆಗಳು ಬಂದು ಅವರನ್ನು ಎಳೆದೊಯ್ಯುತ್ತಿರುವುದನ್ನು ನೋಡಿದ್ದಾರೆ ಎನ್ನಲಾಗಿದೆ.

Share This
300x250 AD
300x250 AD
300x250 AD
Back to top