Slide
Slide
Slide
previous arrow
next arrow

ಶ್ರೀನಿಕೇತನದಲ್ಲಿ ಭಗವದ್ಗೀತಾ ಅಭಿಯಾನದ ಉದ್ಘಾಟನೆ

300x250 AD

ಶಿರಸಿ: ತಾಲೂಕಿನ ಇಸಳೂರಿನಲ್ಲಿ ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ, ಸೋಂದಾ ಇದರ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯಲ್ಲಿ ಭಗವದ್ಗೀತಾ ಅಭಿಯಾನದ ಅಂಗವಾಗಿ ಭಗವದ್ಗೀತಾ ಪ್ರಶಿಕ್ಷಣ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಶಾಲೆಯ ಪ್ರಾಚಾರ್ಯರಾದ ವಸಂತ ಭಟ್ ಅವರು ದೀಪ ಬೆಳಗಿಸುವುದರ ಮೂಲಕ ಪ್ರಶಿಕ್ಷಣಕ್ಕೆ ಚಾಲನೆ ನೀಡಿ ಭಗವದ್ಗೀತೆ ಅತ್ಯದ್ಭುತವಾದ ಮನಃಶಾಸ್ತ್ರ ಅದರ ತತ್ವಗಳನ್ನು ಅರ್ಥೈಸಿಕೊಂಡು ಜೀವನದಲ್ಲಿ ಅಳವಡಿಸಿಕೊಳ್ಳುವುದರ ಕಡೆಗೆ ವಿದ್ಯಾರ್ಥಿಗಳು ಗಮನ ಕೊಡಬೇಕು ಎಂದರು. ಕಾರ್ಯಕ್ರಮದಲ್ಲಿ ಶಿಕ್ಷಕ – ಶಿಕ್ಷಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

300x250 AD
Share This
300x250 AD
300x250 AD
300x250 AD
Back to top