Slide
Slide
Slide
previous arrow
next arrow

ಕಂಪ್ಲಿ ಮಹಾಶಕ್ತಿ ಕೇಂದ್ರ ವ್ಯಾಪ್ತಿಯ ಸಂಘಟನಾತ್ಮಕ ಸಭೆ ಯಶಸ್ವಿ

300x250 AD

ಯಲ್ಲಾಪುರ : ಪಶ್ಚಿಮ ಘಟ್ಟ ಸಂರಕ್ಷಣಾ ಕಾರ್ಯಪಡೆ ಸಮಿತಿ ಅಧ್ಯಕ್ಷರಾದ ಗೋವಿಂದ ನಾಯ್ಕ ಅವರ ನೇತೃತ್ವದಲ್ಲಿ ನ.3ರಂದು ಮಂಚಿಕೇರಿ ಸಮಾಜ ಮಂದಿರದಲ್ಲಿ ಕಂಪ್ಲಿ ಮಹಾಶಕ್ತಿ ಕೇಂದ್ರ ವ್ಯಾಪ್ತಿಯ ಸಂಘಟನಾತ್ಮಕ ಸಭೆ ನಡೆಯಿತು.

ದೀಪ ಬೆಳಗಿಸುವುದರ ಮೂಲಕವಾಗಿ ಸಂಘಟನಾತ್ಮಕ ಸಭೆಯನ್ನು ಉದ್ಘಾಟಿಸಿದ ಪಶ್ಚಿಮ ಘಟ್ಟ ಸಂರಕ್ಷಣಾ ಕಾರ್ಯಪಡೆಯ ಸಮಿತಿ ಅಧ್ಯಕ್ಷರಾದ ಗೋವಿಂದ ನಾಯ್ಕ ಅವರು ಪಕ್ಷದ ಸಂಘಟನೆ ಕುರಿತಂತೆ ಕಾರ್ಯಕರ್ತರಿಗೆ ಅಗತ್ಯ ಸಲಹೆ ಸೂಚನೆಗಳನ್ನು ನೀಡಿ, ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು.

300x250 AD

ಈ ಮಂಡಲಾಧ್ಯಕ್ಷರಾದ ಗೋಪಾಲಕೃಷ್ಣ ಎನ್.ಗಾಂವ್ಕರ್, ತಾಲೂಕಿನ ಪ್ರಭಾರಿಗಳಾದ ನಾಗರಾಜ ನಾಯಕ, ಯುವ ನಾಯಕರಾದ ವಿವೇಕ್ ಹೆಬ್ಬಾರ್, ರಾಜ್ಯ ಮಹಿಳಾ ಕಾರ್ಯಕಾರಣಿ ಸದಸ್ಯೆ ರೇಖಾ ಹೆಗಡೆ, ಮಂಡಲ ಪ್ರಧಾನ ಕಾರ್ಯದರ್ಶಿ ಡಾ.ರವಿ ಭಟ್ ಬರಗದ್ದೆ, ಪ್ರಸಾದ ಹೆಗಡೆ, ಮಹಾಶಕ್ತಿ ಕೇಂದ್ರ ಅಧ್ಯಕ್ಷರಾದ ದತ್ತು ನಾಯ್ಕ, ಪ್ರಧಾನ ಕಾರ್ಯದರ್ಶಿ ನಾಗರಾಜ ಕವಡಿಕೆರೆ ಹಾಗೂ ಪಕ್ಷದ ವಿವಿಧಸ್ತರದ ಪದಾಧಿಕಾರಿಗಳು ಕಾರ್ಯಕರ್ತರು ಉಪಸ್ಥಿತರಿದ್ದರು.

Share This
300x250 AD
300x250 AD
300x250 AD
Back to top