• Slide
    Slide
    Slide
    previous arrow
    next arrow
  • ನಡಿಗೆ ಸ್ಪರ್ಧೆ: ಗಣೇಶನಗರ ಪ್ರೌಢಶಾಲೆ ವಿದ್ಯಾರ್ಥಿನಿ ರಾಜ್ಯಮಟ್ಟಕ್ಕೆ

    300x250 AD

    ಶಿರಸಿ: ನಗರದ ಶ್ರೀ ಮಾರಿಕಾಂಬಾ  ಕ್ರೀಡಾಂಗಣದಲ್ಲಿ ನಡೆದ ಜಿಲ್ಲಾಮಟ್ಟದ ಪ್ರೌಢಶಾಲಾ ಮಕ್ಕಳ ಕ್ರೀಡಾಕೂಟದಲ್ಲಿ ಸರಕಾರಿ ಪ್ರೌಢಶಾಲೆ ಗಣೇಶನಗರದ 09 ನೇ ತರಗತಿಯ ವಿದ್ಯಾರ್ಥಿನಿ ಶಾಜಿಯಾ ದಂಡಿನ್ 3 ಕಿ.ಮೀ. ನಡಿಗೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾಳೆ.

    ಇವಳಿಗೆ ದೈಹಿಕ ಶಿಕ್ಷಕರಾದ ಶ್ರೀಧರ್ ಎಸ್.ಪಿ. ಮಾರ್ಗದರ್ಶನ ನೀಡಿದ್ದಾರೆ. ಶಾಲೆಗೆ ಕೀರ್ತಿ ತಂದ ವಿದ್ಯಾರ್ಥಿನಿ ಮತ್ತು ಮಾರ್ಗದರ್ಶಕರನ್ನು ಎಸ್.ಡಿ.ಎಂ.ಸಿ ಉಪಾಧ್ಯಕ್ಷರಾದ ಪ್ರಕಾಶ ಆಚಾರಿ ಮತ್ತು ಸದಸ್ಯರು, ಮುಖ್ಯಾಧ್ಯಾಪಕ ಆರ್.ಜಿ.ಪಟಗಾರ ಮತ್ತು ಶಿಕ್ಷಕವೃಂದದವರು ಅಭಿನಂದಿಸಿ,ಮುಂದಿನ ಹಂತಕ್ಕೆ ಶುಭ ಹಾರೈಸಿದ್ದಾರೆ.

    300x250 AD
    Share This
    300x250 AD
    300x250 AD
    300x250 AD
    Leaderboard Ad
    Back to top