Slide
Slide
Slide
previous arrow
next arrow

ಕ್ಷೀರ ಸಂಜೀವಿನಿ ಯೋಜನೆಯಡಿ ಫಲಾನುಭವಿಗಳಿಗೆ ಚೆಕ್ ವಿತರಿಸಿದ ಸುರೇಶ್ಚಂದ್ರ ಕೆಶಿನ್ಮನೆ

300x250 AD

ಶಿರಸಿ: ಧಾರವಾಡ, ಗದಗ ಮತ್ತು ಉತ್ತರಕನ್ನಡ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿ., ಧಾರವಾಡದ ವತಿಯಿಂದ ಕ್ಷೀರ ಸಂಜೀವಿನಿ ಯೋಜನೆಯಡಿ ತಾಲೂಕಿನ ಹುಡೇಲಕೊಪ್ಪ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ 12 ಜನ ಸದಸ್ಯರಿಗೆ ಹೈನುಗಾರಿಕೆಗೆ ಉತ್ತೇಜನ ನೀಡುವ ದೃಷ್ಟಿಯಿಂದ ಸಾಲದ ರೂಪದಲ್ಲಿ ಬಡ್ಡಿ ರಹಿತವಾಗಿ ತಲಾ ರೂ.25,000/-ಗಳ ಚೆಕ್’ನ್ನು ಧಾರವಾಡ, ಗದಗ ಮತ್ತು ಉತ್ತರಕನ್ನಡ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿ., ಧಾರವಾಡದ ನೌಕರರ ಕಲ್ಯಾಣ ಸಂಘದ ಅಧ್ಯಕ್ಷ ಸುರೇಶ್ಚಂದ್ರ ಕೃಷ್ಣ ಹೆಗಡೆ ಕೆಶಿನ್ಮನೆ ಅವರು ಹುಡೇಲಕೊಪ್ಪ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದಲ್ಲಿ ವಿತರಿಸಿದರು.


ಈ ಸಂದರ್ಭದಲ್ಲಿ ಕಲ್ಯಾಣ ಸಂಘದ ಅಧ್ಯಕ್ಷರಾದ ಸುರೇಶ್ಚಂದ್ರ ಕೃಷ್ಣ ಹೆಗಡೆ ಕೆಶಿನ್ಮನೆ ಮಾತನಾಡಿ, ನೂತನವಾಗಿ ಪ್ರಾರಂಭಗೊಂಡ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ಹಾಲು ಉತ್ಪಾದಕರಿಗೆ ಹೈನುಗಾರಿಕೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳಲು ಕ್ಷೀರ ಸಂಜೀವಿನಿ ಯೋಜನೆಯಡಿ ಈ ಸಾಲವನ್ನು 1ವರ್ಷದ ಅವಧಿಯವರೆಗೆ ಬಡ್ಡಿ ರಹಿತವಾಗಿ ನೀಡಲಾಗುತ್ತದೆ. ಸಾಲ ಪಡೆದ ಫಲಾನುಭವಿಯು ತಾವು ಸಾಲ ಪಡೆದ ಸಂಘಕ್ಕೆ ಹಾಲು ಪೂರೈಸುವ ಮೂಲಕ ಪ್ರತೀ ತಿಂಗಳು ರೂ. 2000/-ರಂತೆ ಸಂಘದ ಮೂಲಕ ಒಕ್ಕೂಟಕ್ಕೆ ಮರುಪಾವತಿ ಮಾಡಬೇಕಾಗಿದ್ದು, ಕ್ಷೀರ ಸಂಜೀವಿನಿ ಯೋಜನೆಯಡಿ ಸಾಲ ಪಡೆದ ಫಲಾನುಭವಿಗಳು ವರ್ಷದ ಅವಧಿಯೊಳಗೆ ಯಶಸ್ವಿಯಾಗಿ ತಾವು ಪಡೆದ ಸಾಲವನ್ನು ಸಂಪೂರ್ಣವಾಗಿ ಮರುಪಾವತಿ ಮಾಡಿದ್ದಲ್ಲಿ ಅದೇ ಸಂಘದ ಸದಸ್ಯತ್ವ ಹೊಂದಿದ ಇನ್ನುಳಿದ ಹಾಲು ಉತ್ಪಾದಕ ಫಲಾನುಭವಿಗಳಿಗೆ ರೂ.25,000/-ಗಳ ಸಾಲವನ್ನು ಬಡ್ಡಿ ರಹಿತವಾಗಿ ನೀಡಲಾಗುವುದು ಎಂದರು. ಗ್ರಾಮೀಣ ಭಾಗದಲ್ಲಿ ಅದರಲ್ಲಿಯೂ ಅತೀ ಮುಖ್ಯವಾಗಿ ಹೈನುಗಾರಿಕೆಯ ಮೂಲಕ ಮಹಿಳೆಯರು ಸ್ವಾವಲಂಬಿಗಳಾಗಲು ಕ್ಷೀರ ಸಂಜೀವಿನಿ ಯೋಜನೆಯು ಅತ್ಯಂತ ಸಹಾಯಕವಾಗಿದ್ದು, ಈ ಯೋಜನೆಯನ್ನು ಗ್ರಾಮೀಣ ಭಾಗದ ಮಹಿಳೆಯರು ಉತ್ತಮ ರೀತಿಯಲ್ಲಿ ಸದುಪಯೋಗ ಪಡಿಸಿಕೊಂಡು ಯಶಸ್ವೀ ಹೈನುಗಾರರಾಗಬೇಕೆಂದು ಈ ಮೂಲಕ ಅವರು ಕರೆ ನೀಡಿದರು.
ಈ ಸಂದರ್ಭದಲ್ಲಿ ವಿಸ್ತರಣಾಧಿಕಾರಿ ಮೌನೇಶ ಎಂ ಸೋನಾರ, ಹುಡೇಲಕೊಪ್ಪ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ಅಧ್ಯಕ್ಷರಾದ ಸುಮಾ ನಾಗರಾಜ ಹೆಗಡೆ, ಮುಖ್ಯ ಕಾರ್ಯನಿರ್ವಾಹಕರಾದ ಹೇಮಾ ಬಿ ಅರಳೇಶ್ವರ, ಸಂಘದ ಆಡಳಿತ ಮಂಡಳಿಯ ಸದಸ್ಯರು, ಹಾಲು ಉತ್ಪಾದಕರುಗಳು ಉಪಸ್ಥಿತರಿದ್ದರು.

300x250 AD
Share This
300x250 AD
300x250 AD
300x250 AD
Back to top