• Slide
    Slide
    Slide
    previous arrow
    next arrow
  • ರಾಜ್ಯ ಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳು

    300x250 AD

    ದಾಂಡೇಲಿ : ನಗರದ ಸೈಂಟ್ ಮೈಕಲ್ ಕಾನ್ವೆಂಟ್ ಹಿ.ಪ್ರಾ.ಶಾಲೆಯ ಪ್ರತಿಭಾನ್ವಿತ ಕ್ರೀಡಾಪಟುಗಳಾದ ದಿಗಂತ ದೀಪಕ್ ನಾಯಕ ಮತ್ತು ಸಾಹಿಲ್ ನರಹರಿ ಸಾವಂತ್ ಇವರು ರಾಜ್ಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿಗೆ ಆಯ್ಕೆಯಾಗಿ ಶಾಲೆಗೆ ಹಾಗೂ ನಗರಕ್ಕೆ ಕೀರ್ತಿ ತಂದಿದ್ದಾರೆ.

    ಶಿರಸಿಯಲ್ಲಿ ನಡೆದ ಬೆಳಗಾವಿ ವಿಭಾಗ ಮಟ್ಟದ ಪಂದ್ಯಾವಳಿಯಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟದ ಪಂದ್ಯಾವಳಿಗೆ ಆಯ್ಕೆಯಾಗಿದ್ದಾರೆ. ಸಾಧನೆಗೈದ ವಿದ್ಯಾರ್ಥಿಗಳಿಬ್ಬರನ್ನು ಸೈಂಟ್ ಮೈಕಲ್ ಕಾನ್ವೆಂಟ್ ಶಾಲೆಯ ಮುಖ್ಯೋಪಾಧ್ಯಯಿನಿ ಸಿಸ್ಟರ್ ಕ್ಲೇರೆಟ್ ಅವರು ಇಂದು ಶಾಲೆಯಲ್ಲಿ ಅಭಿನಂದಿಸಿ ಶುಭ ಹಾರೈಸಿದರು. ವಿದ್ಯಾರ್ಥಿಗಳ ಸಾಧನೆಗೆ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಪ್ರಮೋದ್ ಮಹಾಲೆ, ದೈಹಿಕ ಶಿಕ್ಷಣ ಪರಿವೀಕ್ಷಕರಾದ ವಿವೇಕ್ ಕವರಿ, ಶಾಲೆಯ ದೈಹಿಕ ಶಿಕ್ಷಕರಾದ ಸೀತರಾಮ ನಾಯ್ಕ, ದಾಂಡೇಲಿ ಬ್ಯಾಡ್ಮಿಂಟನ್ ಅಸೋಸಿಯೇಶನಿನ ಅಧ್ಯಕ್ಷರಾದ ಎಸ್.ಪ್ರಕಾಶ ಶೆಟ್ಟಿ ಸೇರಿದಂತೆ ನಗರದ ಗಣ್ಯರನೇಕರು ಹರ್ಷ ವ್ಯಕ್ತಪಡಿಸಿ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

    300x250 AD
    Share This
    300x250 AD
    300x250 AD
    300x250 AD
    Leaderboard Ad
    Back to top