Slide
Slide
Slide
previous arrow
next arrow

ಆಸ್ತಿಗಾಗಿ ನಡೆದ ಜಗಳ: ತಮ್ಮಂದಿರಿಂದಲೇ ಅಣ್ಣನ ಕೊಲೆ, ಪ್ರಕರಣ ದಾಖಲು

300x250 AD

ಹೊನ್ನಾವರ: ಹೊನ್ನಾವರ ತಾಲೂಕಿನ ಅರೇಅಂಗಡಿ–ನಿಲ್ಕೋಡ ಸಮೀಪದ ತೊಟ್ಟಿಲಗುಂಡಿಯಲ್ಲಿ ಸಹೋದರರ ನಡುವೆ ಆಸ್ತಿ ವಿಷಯದ ಜಗಳವು ಅಣ್ಣನ ಕೊಲೆಯಲ್ಲಿ ಅಂತ್ಯಕಂಡಿದೆ.

ಮನೆಯ ಆಸ್ತಿ ವಿಷಯಕ್ಕೆ ಆಗಾಗ ಸಹೋದರರ ನಡುವೆ ನಡೆಯುತ್ತಿದ್ದ ಜಗಳ ವಿಕೋಪಕ್ಕೆ ತೆರಳಿದೆ. ಮಾತಿಗೆ ಮಾತು ಬೆಳೆದು ಕೈ ಕೈ‌ಮಿಲಾಯಿಸಿಕೊಂಡು ವಿನಾಯಕ ನಾಯ್ಕ ಮತ್ತು ಚಿದಾನಂದ ನಾಯ್ಕ ಎನ್ನುವವರು ಅಣ್ಣನಾದ ಹನುಂಮತ ನಾಯ್ಕ ಎನ್ನುವವರ ಮೇಲೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.

ತಲೆ ಭಾಗಕ್ಕೆ ಗಂಭೀರವಾಗಿ ಗಾಯವಾದ ಪರಿಣಾಮ ಹನುಮಂತ ಹೊನ್ನಪ್ಪ ನಾಯ್ಕ್(54) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ಘಟನೆಯಲ್ಲಿ ಮೃತರ ಸೋದರ ಮಾವ ಮಾರುತಿ ನಾಯ್ಕ್ (70) ಗಂಭೀರ ಗಾಯಗೊಂಡಿದ್ದಾರೆ.

300x250 AD

ಹಲ್ಲೆ ಮಾಡಿ ಕೊಲೆಗೆ ಕಾರಣರಾದ ವಿನಾಯಕ ನಾಯ್ಕ, ಚಿದಾನಂದ ನಾಯ್ಕ್ ನಾಪತ್ತೆಯಾಗಿದ್ದು‌ ಹೊನ್ನಾವರ ಪೊಲೀಸರು ಆರೋಪಿಗಳಿಗಾಗಿ ಬಲೆ ಬೀಸಿದ್ದಾರೆ. ಹೊನ್ನಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This
300x250 AD
300x250 AD
300x250 AD
Back to top