• Slide
    Slide
    Slide
    previous arrow
    next arrow
  • ಕೈ ಕುಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಯುವಕ ಆಸ್ಪತ್ರೆಗೆ ದಾಖಲು

    300x250 AD

    ದಾಂಡೇಲಿ: ಬ್ಲೇಡ್‌ನಿಂದ ಕೈ ಕುಯ್ದುಕೊಂಡು ಯುವಕನೋರ್ವ ಆತ್ಮಹತ್ಯೆಗೆ ವಿಫಲ ಯತ್ನ ನಡೆಸಿದ ಘಟನೆ ನಗರದಲ್ಲಿ ನಡೆದಿದೆ.
    ನಗರದ ಸಮೀಪದ ಕೋಗಿಲಬನ ಗ್ರಾಮದ ನಿವಾಸಿ ಗುರು ಲೋಕರೆ ಎಂಬಾತನೇ ಆತ್ಮಹತ್ಯೆಗೆ ವಿಫಲ ಯತ್ನ ನಡೆಸಿದ ಯುವಕನಾಗಿದ್ದು, ಕಳೆದ ತಿಂಗಳು ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈತನ ಮೇಲೆಯೂ ಪ್ರಕರಣ ದಾಖಲಾಗಿದೆ. ಹೀಗಾಗಿ ಇಂತಹ ಯಾವುದೋ ವಿಚಾರಕ್ಕೆ ಮನನೊಂದು ಆತ್ಮಹತ್ಯೆಗೆ ಯತ್ನಿಸಿದ್ದು, ಸಾರ್ವಜನಿಕರು ಕಂಡು ಕೂಡಲೇ ಈತನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾನೆ. ನಗರ ಠಾಣೆಯ ಪೊಲೀಸರು ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿ, ಮುಂದಿನ ಕ್ರಮವನ್ನು ಕೈಗೊಂಡಿದ್ದಾರೆ.

    300x250 AD
    Share This
    300x250 AD
    300x250 AD
    300x250 AD
    Leaderboard Ad
    Back to top