Slide
Slide
Slide
previous arrow
next arrow

ನ. 11ಕ್ಕೆ ಪಿಯು ವಿದ್ಯಾರ್ಥಿಗಳಿಗಾಗಿ ತಾಲೂಕು ಮಟ್ಟದ ಸಾಂಸ್ಕೃತಿಕ ಸಹಪಠ್ಯಗಳ ಸ್ಪರ್ಧೆ

300x250 AD

ಶಿರಸಿ : ಪದವಿಪೂರ್ವ ಶಿಕ್ಷಣ ಇಲಾಖೆ ಕಾರವಾರ  ಹಾಗೂ ಎಂ. ಇ. ಎಸ್. ಚೈತನ್ಯ ಪದವಿಪೂರ್ವ ಮಹಾವಿದ್ಯಾಲಯ, ಶಿರಸಿ  ಇವರ ಸಂಯುಕ್ತ ಅಶ್ರಯದಲ್ಲಿ ಪದವಿಪೂರ್ವ ವಿದ್ಯಾರ್ಥಿಗಳಿಗೆ ತಾಲೂಕು ಮಟ್ಟದ ಸಾಂಸ್ಕೃತಿಕ ಸಹಪಠ್ಯಗಳ ಸ್ಪರ್ಧೆಯನ್ನು ನ.11 ಗುರುವಾರ ನಗರದ ಚೈತನ್ಯ ಪಿಯು‌ ಕಾಲೇಜಿನಲ್ಲಿ ಆಯೋಜಿಸಲಾಗಿದೆ.

ಕಾರ್ಯಕ್ರಮದ‌ ಉದ್ಘಾಟನೆಯನ್ನು ಸಭಾಧ್ಯಕ್ಷ‌ ವಿಶ್ವೇಶ್ವರ ಹೆಗಡೆ ಕಾಗೇರಿ‌ ನೆರವೇರಿಸಲಿದ್ದು, ಮುಖ್ಯ ಅತಿಥಿಗಳಾಗಿ ಪದವಿಪೂರ್ವ ಶಿಕ್ಷಣ ಇಲಾಖೆ, ಉಪನಿರ್ದೇಶಕ ಹನುಮಂತಪ್ಪ ನಿಟ್ಟೂರು, ನಿವೃತ್ತ ಪ್ರಾಂಶುಪಾಲ,ಶಿರಸಿ ಅರ್ಬನ್ ಕೋ ಆಪ್ ಬ್ಯಾಂಕ್, ನಿರ್ದೇಶಕ ಕೆ. ಎನ್. ಹೊಸಮನಿ ಆಗಮಿಸಲಿದ್ದಾರೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಂಇಎಸ್ ಅಧ್ಯಕ್ಷ‌ ಜಿ.ಎಂ.ಹೆಗಡೆ ಮುಳಖಂಡ ವಹಿಸಲಿದ್ದು, ಎಂಇಎಸ್ ಪ್ರಧಾನ ಕಾರ್ಯದರ್ಶಿ ಎಸ್.ಪಿ.ಶೆಟ್ಟಿ, ಚೈತನ್ಯ ಪಿಯು‌ ಕಾಲೇಜ್ ಉಪಸಮಿತಿ ಅಧ್ಯಕ್ಷ ಕೆ.ಬಿ.ಲೋಕೇಶ್ ಹೆಗಡೆ, ಮಾರಿಕಾಂಬಾ ಪಿಯು ಕಾಲೇಜ್ ಪ್ರಾಚಾರ್ಯ  ಬಾಲಚಂದ್ರ ಉಪಸ್ಥಿತರಿರಲಿದ್ದಾರೆ.

300x250 AD

ಕಾರ್ಯಕ್ರಮಕ್ಕೆ ಸರ್ವರೂ ಆಗಮಿಸಬೇಕೆಂದು ಪ್ರಕಟಣೆಯಲ್ಲಿ ಕೋರಲಾಗಿದೆ.

Share This
300x250 AD
300x250 AD
300x250 AD
Back to top