Slide
Slide
Slide
previous arrow
next arrow

ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಜಾಗೃತಿ ಕಾರ್ಯಕ್ರಮ

300x250 AD

ಮುಂಡಗೋಡ: ತಾಲೂಕ ಆಡಳಿತ ಹಾಗೂ ತಾಲೂಕ ಪಂಚಾಯತ್ ಮತ್ತು ತಾಲೂಕ ಸ್ವೀಪ್ ಸಮಿತಿ ಸಂಯುಕ್ತಾಶ್ರಯದಲ್ಲಿ ಬುಧವಾರ ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ-2023 ಜಾಗೃತಿ ಕಾರ್ಯಕ್ರಮ ನಡೆಯಿತು.
ಪ್ರವಾಸಿ ಮಂದಿರದ ಆವರಣದಲ್ಲಿ ತಹಶೀಲ್ದಾರ ಕಂದಾಯ ಇಲಾಖೆ ಸಿಬ್ಬಂದಿಗಳು, ಶಿಕ್ಷಕರು ಹಾಗೂ ಕಾಲೇಜ್ ವಿದ್ಯಾರ್ಥಿಗಳು ಸೇರಿಕೊಂಡು ಅಲ್ಲಿಂದ ಜಾಥಾ ಹೊರಟು ತಾಲೂಕಾ ಶಕ್ತಿ ಸೌಧದಲ್ಲಿ ಜಾಥಾದ ಕಾರ್ಯಕ್ರಮದ ಕುರಿತು ಕಂದಾಯ ಇಲಾಖೆ ಸಿಬ್ಬಂದಿ ರಾಘವೇಂದ್ರ ಗಿರಡ್ಡಿ ಮಾತನಾಡಿ ಮಾತನಾಡಿದರು.
ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ-2023 ಜಾಗೃತಿ ಜಾಥಾ ಕಾರ್ಯಕ್ರಮದಲ್ಲಿ ಗ್ರೇಡ್ 2 ತಹಶೀಲ್ದಾರ ಗಣಪತಿ ಭಟ್ಟ, ನವೀನ ಕುಲಕರ್ಣಿ, ಶ್ರೀಕಾಂತ ಹೊಸಮನಿ, ತುಕಾರಾಮ ಪಾಟೀಲ ಸೇರಿದಂತೆ ಕಂದಾಯ ಸಿಬ್ಬಂದಿಗಳು ಶಿಕ್ಷಕರು ಹಾಗೂ ವಿವಿಧ ಕಾಲೇಜ್ ವಿದ್ಯಾರ್ಥಿಗಳು ಇದ್ದರು.

300x250 AD
Share This
300x250 AD
300x250 AD
300x250 AD
Back to top