• Slide
    Slide
    Slide
    previous arrow
    next arrow
  • ನಿಗದಿತ ಸಮಯಕ್ಕೆ ಬಸ್ ಬಿಡುವಂತೆ ಆಗ್ರಹ

    300x250 AD

    ದಾಂಡೇಲಿ: ಧಾರವಾಡದಿಂದ ವಯಾ ಹಳಿಯಾಳ-ದಾಂಡೇಲಿಗೆ ಸಮಯಕ್ಕೆ ಸರಿಯಾಗಿ ಬಸ್ಸು ಬಿಡದೇ ಇರುವುದರಿಂದ ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರಿಗೆ ತೀವ್ರ ತೊಂದರೆಯಾಗುತ್ತಿದೆ.
    ವಿದ್ಯಾರ್ಥಿಗಳಿಗಂತೂ ಸಮಯಕ್ಕೆ ಸರಿಯಾಗಿ ಬಸ್ ಬರದೇ ಇರುವುದರಿಂದ ಶಾಲೆ, ಕಾಲೇಜುಗಳಿಗೆ ಹೋಗಲು ಕಷ್ಟಸಾಧ್ಯವಾಗುತ್ತಿದೆ. ಕಳೆದ ಹಲವು ತಿಂಗಳುಗಳಿಂದ ಈ ಸಮಸ್ಯೆ ಉಂಟಾಗಿದ್ದು, ಈ ಕೂಡಲೆ ದಾಂಡೇಲಿ ಮತ್ತು ಧಾರವಾಡ ಸಾರಿಗೆ ಘಟಕದವರು ನಿಗದಿತ ಸಮಯಕ್ಕೆ ಬಸ್ಸುಗಳನ್ನು ಬಿಡುವಂತೆ ದಾಂಡೇಲಿ ನಗರದಲ್ಲಿ ವಿದ್ಯಾರ್ಥಿಗಳು ಮತ್ತು ಇತರೇ ಪ್ರಯಾಣಿಕರು ಸಾರಿಗೆ ಘಟಕವನ್ನು ಆಗ್ರಹಿಸಿದ್ದಾರೆ.

    300x250 AD
    Share This
    300x250 AD
    300x250 AD
    300x250 AD
    Leaderboard Ad
    Back to top