• Slide
    Slide
    Slide
    previous arrow
    next arrow
  • ಬಸ್’ನಲ್ಲಿ ಹೃದಯಾಘಾತ: ಜಿಲ್ಲಾ ನ್ಯಾಯಾಧೀಶ ನಾಗಪ್ಪ ನಿಧನ

    300x250 AD

    ಕಾರವಾರ: ಕಳೆದ ಕೆಲವು ವರ್ಷಗಳ ಹಿಂದೆ ಕಾರವಾರದಲ್ಲಿ ಸಿಜೆಎಂ ಆಗಿ ಕರ್ತವ್ಯ ನಿರ್ವಹಿಸಿದ್ದ ಈಗ ಜಿಲ್ಲಾ ನ್ಯಾಯಾಧೀಶರಾಗಿದ್ದ ನಾಗಪ್ಪ ಎಂಬುವವರು ಗೋವಾಕ್ಕೆ ತೆರಳುತ್ತಿದ್ದ ವೇಳೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ಕಾರವಾರದಿಂದ ಗೋವಾಕ್ಕೆ ಬಸ್ಸಿನಲ್ಲಿ ತೆರಳುತ್ತಿರುವ ಸಂದರ್ಭದಲ್ಲಿ ಹೃದಯಾಘಾತವಾಗಿದ್ದು, ಬಸ್ ಕೋಡಿಬಾಗದ ದಿವೇಕರ ಕಾಲೇಜು ಸಮೀಪ ಬಂದಾಗ ಅವರು ಕುಸಿದು ಬಿದ್ದಿದ್ದಾರೆ.

    ಕೂಡಲೇ ಬಸ್ ನಿಲ್ಲಿಸಿ ಅವರನ್ನು ಜಿಲ್ಲಾ ಆಸ್ಪತ್ರೆಗೆ ಸಾಗಿಸಲಾಗಿದ್ದು ಅಲ್ಲಿ ಅವರು ಮೃತಪಟ್ಟಿರುವುದಾಗಿ ವೈದ್ಯರು ಸಂಬಂಧಪಟ್ಟವರಿಗೆ ತಿಳಿಸಿದ್ದಾರೆ. ಈ ಕುರಿತು ನಗರಠಾಣೆಯಲ್ಲಿ ದೂರು ದಾಖಲಾಗಿದೆ. ನಾಗಪ್ಪ ಅವರು ಈಗ ಜಿಲ್ಲಾ ನ್ಯಾಯಾಧೀಶರಾಗಿ ಬೆಂಗಳೂರಿನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು ಎಂದು ತಿಳಿದುಬಂದಿದೆ.

    300x250 AD
    Share This
    300x250 AD
    300x250 AD
    300x250 AD
    Leaderboard Ad
    Back to top