ಯಲ್ಲಾಪುರ: ಟ್ಯಾಂಕರ್ಗೆ ಸ್ಕೂಲ್ ಬಸ್ ಡಿಕ್ಕಿ ಹೊಡೆದು 13 ಶಿಕ್ಷಕರು ಹಾಗೂ ಚಾಲಕನೋರ್ವ ಗಾಯಗೊಂಡ ಘಟನೆ ತಾಲೂಕಿನ ಅರಬೈಲ್ ಘಟ್ಟದಲ್ಲಿ ಶುಕ್ರವಾರ ಬೆಳಗ್ಗೆ ನಡೆದಿದೆ.
ಹುಬ್ಬಳ್ಳಿಯ ಸೆಂಟ್ ಆಂತೋನಿ ಪಬ್ಲಿಕ್ ಶಾಲೆಯ ಶಿಕ್ಷಕರು ಸ್ಕೂಲ್ ಬಸ್ನಲ್ಲಿ ಸುಂಕಸಾಳಕ್ಕೆ ಪ್ರವಾಸಕ್ಕೆ ತೆರಳುತ್ತಿದ್ದರು. ಅರಬೈಲ್ ಘಟ್ಟದಲ್ಲಿ ಹಾಳಾಗಿ ನಿಂತಿದ್ದ ಟ್ಯಾಂಕರ್ ಹಿಂದೆ ಇನ್ನೊಂದು ಟ್ಯಾಂಕರ್ ನಿಂತಿದ್ದು, ಅದಕ್ಕೆ ಸ್ಕೂಲ್ ಬಸ್ ಡಿಕ್ಕಿ ಹೊಡೆದಿದೆ.
ಬಸ್ ಚಾಲಕನಿಗೆ ಹೆಚ್ಚಿನ ಗಾಯಗಳಾಗಿದ್ದು, 13ಕ್ಕೂ ಹೆಚ್ಚು ಶಿಕ್ಷಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನು ಯಲ್ಲಾಪುರದ ತಾಲೂಕಾ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ.
ಟ್ಯಾಂಕರ್ಗೆ ಶಾಲಾ ಬಸ್ ಡಿಕ್ಕಿ; 14 ಮಂದಿಗೆ ಗಾಯ
