Slide
Slide
Slide
previous arrow
next arrow

ಜಿಲ್ಲಾಮಟ್ಟದ ಪ್ರಬಂಧ ಸ್ಪರ್ಧೆ: ಶ್ರೀದೇವಿ ಮಹಾವಿದ್ಯಾಲಯದ ವಿದ್ಯಾರ್ಥಿನಿಯ ಸಾಧನೆ

300x250 AD

ಶಿರಸಿ: ಕಾರವಾರದ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ  ನಡೆದ ಜಿಲ್ಲಾಮಟ್ಟದ SVEEP ಕಾರ್ಯಕ್ರಮದ ಪ್ರಬಂಧ ಸ್ಪರ್ಧೆಯಲ್ಲಿ ತಾಲೂಕಿನ ಹುಲೇಕಲ್ ಶ್ರೀದೇವಿ ಸಂಯುಕ್ತ ಪದವಿ ಪೂರ್ವ ಮಹಾವಿದ್ಯಾಲಯದ ಕು. ಭಾಗ್ಯಲಕ್ಷ್ಮೀ ಆರ್. ಹೆಗಡೆ ಪ್ರಥಮ ಸ್ಥಾನ ಪಡೆದು ಮಹಾವಿದ್ಯಾಲಯಕ್ಕೆ ಕೀರ್ತಿ ತಂದಿದ್ದಾಳೆ. 

ಇವಳ ಈ ಸಾಧನೆಗೆ ಸಂಸ್ಥೆಯ ಗೌರವಾಧ್ಯಕ್ಷರಾದ ಶ್ರೀಮದ್ ಗಂಗಾಧರೇಂದ್ರ ಸರಸ್ವತೀ ಮಹಾಸ್ವಾಮಿಗಳು, ಕಾರ್ಯಾಧ್ಯಕ್ಷರು ಹಾಗೂ ಆಡಳಿತ ವರ್ಗ, ಪ್ರಾಚಾರ್ಯರು. ಎಲ್ಲಾ ಉಪನ್ಯಾಸಕ ವೃಂದ ಮತ್ತು ಸಿಬ್ಬಂದಿ ವರ್ಗ ಅಭಿಮಾನ ವ್ಯಕ್ತಪಡಿಸುತ್ತಾ ಅಭಿನಂದನೆ ಸಲ್ಲಿಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top