Slide
Slide
Slide
previous arrow
next arrow

ಸಂಸ್ಕೃತೋತ್ಸವದಲ್ಲಿ ಸಾಧನೆ ಮೆರೆದ ಲಯನ್ಸ್ ವಿದ್ಯಾರ್ಥಿಗಳು

300x250 AD

ಶಿರಸಿ: ಶ್ರೀ ಸೋಂದಾ ಸ್ವರ್ಣವಲ್ಲಿ ಮಹಾಸಂಸ್ಥಾನದ ಶ್ರೀ ರಾಜರಾಜೇಶ್ವರಿ ವಿದ್ಯಾಸಂಸ್ಥೆಯ ಮೂಲಕ ನಡೆದ ಕರ್ನಾಟಕ ರಾಜ್ಯ ಮಟ್ಟದ  ಸಂಸ್ಕೃತೋತ್ಸವ ಸ್ಫರ್ಧೆಗಳಲ್ಲಿ ನಗರದ ಲಯನ್ಸ್ ಶಾಲಾ ವಿದ್ಯಾರ್ಥಿಗಳು ಭಾಗವಹಿಸಿ ಬಹುಮಾನಗಳನ್ನು ಪಡೆದಿದ್ದಾರೆ.

ಹತ್ತನೇ ತರಗತಿ ವಿದ್ಯಾರ್ಥಿನಿ ಕು.ಸ್ಪೂರ್ತಿ ಹೆಗಡೆ ಗೀತಾಕಂಠಪಾಠದಲ್ಲಿ ದ್ವಿತೀಯ ಸ್ಥಾನ, ಒಂಬತ್ತನೇ ತರಗತಿ ವಿದ್ಯಾರ್ಥಿನಿ ವರ್ಷಾ ಹೆಗಡೆ ಗೀತಾ ಕಂಠಪಾಠದಲ್ಲಿ ತೃತೀಯ ಸ್ಥಾನ, ಶ್ಲೋಕ ಪಠಣದಲ್ಲಿ ಹತ್ತನೇ ತರಗತಿ ವಿದ್ಯಾರ್ಥಿನಿ ಕು. ಸಹನಾ ಶೆಟ್ಟಿ ತೃತೀಯ ಸ್ಥಾನ ಪಡೆದಿದ್ದಾರೆ. ಈ ವಿದ್ಯಾರ್ಥಿಗಳಿಗೆ ಶಾಲೆಯ ಸಂಸ್ಕೃತ ಸಹಶಿಕ್ಷಕರಾದ ಶ್ರೀಮತಿ ವಿದ್ಯಾವತಿ ಭಟ್ ಹಾಗೂ ಕು.ಯಶಸ್ವಿನಿ ಹೆಗಡೆ ಮಾರ್ಗದರ್ಶನ ನೀಡಿದ್ದಾರೆ.

ಎಲ್ಲಾ ವಿಜೇತ ವಿದ್ಯಾರ್ಥಿಗಳಿಗೆ,ಮಾರ್ಗದರ್ಶಿ ಶಿಕ್ಷಕರಿಗೆ, ತರಬೇತಿ ನೀಡಿದ ತರಬೆತುದಾರರಿಗೆ ಹಾಗೂ ಸಹಕರಿಸಿದ ಪಾಲಕ‌ರಿಗೆ ಶಿರಸಿ ಲಯನ್ಸ ಶಿಕ್ಷಣ ಸಂಸ್ಥೆಯ ಅಧ್ಯಕ್ಷರು ಹಾಗೂ ಆಡಳಿತ ಮಂಡಳಿ, ಶಿರಸಿ ಲಯನ್ಸ ಕ್ಲಬ್ ಬಳಗ, ಮುಖ್ಯೋಪಾಧ್ಯಾಯ ಶಶಾಂಕ ಹೆಗಡೆ   ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

300x250 AD

Share This
300x250 AD
300x250 AD
300x250 AD
Back to top